ಭೀಕರ ಅಪಘಾತ: ಕರ್ನಾಟಕ-ತಮಿಳುನಾಡು ಗಡಿ ಗೋಪುರಕ್ಕೆ ಲಾರಿ ಡಿಕ್ಕಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕರ್ನಾಟಕ ಹಾಗೂ ತಮಿಳುನಾಡಿನ ಗಡಿಭಾಗದಲ್ಲಿ ಟಿಪ್ಪರ್ ಲಾರಿಯೊಂದು ಗಡಿ ಗೋಪುರಕ್ಕೆ ಡಿಕ್ಕಿ ಹೊಡೆದು ಮಗುಚಿ ಬಿದ್ದಿದೆ.

ಇದರಿಂದ ಐತಿಹಾಸಿಕ ಗಡಿಗೋಪುರಕ್ಕೂ ಹಾನಿಯಾಗಿದ್ದು,ಸಾರ್ವಜನಿಕರಿಂದ ಆಕ್ರೋಶವೂ ವ್ಯಕ್ತವಾಗಿದೆ.

ಕರ್ನಾಟಕ-ತಮಿಳುನಾಡು ಗಡಿಭಾಗವಾದ ಅತ್ತಿಬೆಲೆಯಲ್ಲಿ ಗಡಿಗೋಪುರಕ್ಕೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದಿದೆ. ಚಾಲಕನ ಬೇಜವಾಬ್ದಾರಿಯ ಚಾಲನೆಗೆ ಈ ಅಪಘಾತ ಸಂಭವಿಸಿದೆ. ಘಟನೆ ಸಂಭವಿಸಿದ ಕೆಲವೇ ಹೊತ್ತಿನಲ್ಲಿ ಕನ್ನಡಪರ ಹೋರಾಟಗಾರರು ಸ್ಥಳದಲ್ಲಿ ಜಮಾಯಿಸಿದ್ದು, ಪ್ರತಿಭಟನೆ ನಡೆಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!