ಕಾರ್ಕಳದ ಸಾಣೂರು ಬಳಿ ಭೀಕರ ಅಪಘಾತ: ವಿದ್ಯಾರ್ಥಿ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ 
 
ಉಡುಪಿ ಜಿಲ್ಲೆಯ ಕಾರ್ಕಳದ ಸಾಣೂರು ಸಮೀಪ ಮುರತ್ತಂಗಡಿಯಲ್ಲಿ ಶುಕ್ರವಾರ ಭೀಕರ ಅಪಘಾತ ನಡೆದಿದ್ದು, ಘಟನೆಯಲ್ಲಿ ಕಾರ್ಕಳ ಭುವನೇಂದ್ರ ಕಾಲೇಜಿನ ಪ್ರಥಮ ಬಿಸಿಎ ವಿದ್ಯಾರ್ಥಿ ಸಾಣೂರು ಗ್ರಾಮದ ಮನನ್‌ (19) ಮೃತಪಟ್ಟಿದ್ದಾರೆ.
ಪರೀಕ್ಷೆ ಮುಗಿಸಿ ಕಾಲೇಜಿನಿಂದ ಮನೆಗೆ ಬೈಕ್‌ನಲ್ಲಿ ತೆರಳುತ್ತಿದ್ದ ಸಂದರ್ಭ ಮುರತ್ತಂಗಡಿಯಲ್ಲಿ ಹಾಲು ಸಾಗಾಟದ ಟೆಂಪೊಗೆ ಡಿಕ್ಕಿಯಾಗಿದ್ದು, ರಸ್ತೆಗೆಸೆಯಲ್ಪಟ್ಟಿದ್ದಾರೆ. ತಕ್ಷಣವೇ ಮನನ್‌ ಮೇಲೆ ಟಿಪ್ಪರ್‌ ಹರಿದು ಹೋಗಿದೆ.

ಗಂಭೀರವಾಗಿ ಗಾಯಗೊಂಡ ಆತನನ್ನು ಕೂಡಲೇ ಮಣಿಪಾಲ ಆಸ್ಪತ್ರೆಗೆ ಕರೆತರಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಸಂಜೆ ವೇಳೆ ಸಾವನ್ನಪ್ಪಿದ್ದಾನೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!