ಬೆಂ-ಮೈ ಎಕ್ಸ್‌ಪ್ರೆಸ್ ವೇನಲ್ಲಿ ಭೀಕರ ಅಪಘಾತ: ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ KSRTC ಬಸ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಂಡ್ಯ ತಾಲೂಕಿನ ರಾಗಿಮುದ್ದನಹಳ್ಳಿ ಗೇಟ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಕೆಎಸ್ ಆರ್ ಟಿಸಿ ಬಸ್ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇಯಲ್ಲಿ ಭೀಕರ ಅಪಘಾತ ಸಂಭವಿಸಿದೆ.

ಪಕ್ಕದ ರಸ್ತೆಯಲ್ಲಿ ಚಲಿಸುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಕೆಎಸ್ ಆರ್ ಟಿಸಿ ಬಸ್ ಹಳ್ಳಕ್ಕೆ ಬಿದ್ದಿದೆ. ಈ ಅವಘಡದಲ್ಲಿ 8 ಬಸ್ ಪ್ರಯಾಣಿಕರಿಗೆ ಗಾಯಗಳಾಗಿದ್ದು, ಚಾಲಕನ ಕಾಲು ಮುರಿದಿದ್ದು, ಗಾಯಾಳುಗಳನ್ನು ಮಂಡ್ಯ, ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ಘಟನೆಯಲ್ಲಿ ಒಂದು ಕಾರು ಮತ್ತು ಕನಿಷ್ಠ ನಾಲ್ಕು ದ್ವಿಚಕ್ರ ವಾಹನಗಳಿಗೆ ಹಾನಿಯಾಗಿದೆ. ಮಂಡ್ಯ ಜಿಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಘಟನಾ ಸ್ಥಳಕ್ಕೆ ಮಂಡ್ಯ ಎಸ್ಪಿ ಯತೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!