ಭೀಕರ ಅಪಘಾತ: ಯಲ್ಲಮ್ಮನ ದರ್ಶನಕ್ಕೆ ತೆರಳುತ್ತಿದ್ದ ಆರು ಮಂದಿ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಳಗಾವಿಯ ರಾಮದುರ್ಗ ತಾಲೂಕಿನ ಚುಂಚನೂರ ಗ್ರಾಮದ ಬಳಿಯ ಕರ್ವ್‌ನಲ್ಲಿ ಬೊಲೆರೊ ವಾಹನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿದ್ದು, ಆರು ಮಂದಿ ಮೃತಪಟ್ಟಿದ್ದಾರೆ.

ಹನುಮವ್ವ, ದೀಪಾ, ಸವಿತಾ, ಸುಪ್ರೀತಾ, ಮಾರುತಿ, ಇಂದಿರವ್ವ ಮೃತರು. ಇವರೆಲ್ಲರೂ ಸವದತ್ತಿ ಯಲ್ಲವ್ವನ ದರ್ಶನಕ್ಕೆ ತೆರಳುತ್ತಿದ್ದರು, ನಡೆದುಕೊಂಡು ಹೋಗುತ್ತಿದ್ದ ಇವರಿಗೆ ಬೊಲೆರೊ ಚಾಲಕ ಡ್ರಾಪ್ ನೀಡುವುದಾಗಿ ಹೇಳಿದ್ದಾರೆ.

ಬೊಲೆರೊ ಹತ್ತಿದ ಹುಲಕುಂದ ಗ್ರಾಮದ ಆರು ಮಂದಿ ಮೃತಪಟ್ಟಿದ್ದಾರೆ. ಬೊಲೆರೊದಲ್ಲಿ 23 ಮಂದಿ ಇದ್ದು, ಸ್ಥಳದಲ್ಲೇ ಐವರು ಮೃತಪಟ್ಟಿದ್ದಾರೆ, ಇನ್ನೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ವಾಹನ ಹತ್ತಿದ ಕೆಲವೇ ನಿಮಿಷಗಳಲ್ಲಿ ಅಪಘಾತ ಸಂಭವಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!