ಮೈಸೂರಿನಲ್ಲಿ ಭೀಕರ ಘಟನೆ: ಟ್ರ‍್ಯಾಕ್ಟರ್‌ಗೆ ಸಿಲುಕಿ ದೇಹ ಛಿದ್ರ ಛಿದ್ರ, 8 ವರ್ಷದ ಬಾಲಕ ದಾರುಣ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ದೇವರಸನಹಳ್ಳಿಯಲ್ಲಿ ಅಜ್ಜಿ ಮನೆಗೆ ಬಂದಿದ್ದ ಬಾಲಕನಿಗೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ಸಾವನ್ನಪ್ಪಿದ ಘಟನೆ ನಡೆದಿದೆ.

ಟ್ರ‍್ಯಾಕ್ಟರ್ ರೊಟಾವೆಲ್ಟರ್‌ಗೆ ಸಿಲುಕಿದ ಪರಿಣಾಮ 8 ವರ್ಷದ ಬಾಲಕ ಭವಿಷ್ ಎಂಬಾತ ಹೊಲದಲ್ಲಿ ದಾರುಣವಾಗಿ ಸಾವನ್ನಪ್ಪಿದ್ದು, ಆತನ ದೇಹ ಛಿದ್ರವಾಗಿದೆ.

ತಾಯಿ ಮಮತಾ ಮಕ್ಕಳೊಂದಿಗೆ ದೇವರಸನಹಳ್ಳಿಗೆ ಬಂದಿದ್ದರು. ಆ ವೇಳೆ ಭವಿಷ್ ಹಾಗೂ ಅವರ ಸೋದರ ಮಾವ ಟ್ರ್ಯಾಕ್ಟರ್ ನಲ್ಲಿ ಜಮೀನಿಗೆ ತೆರಳುತ್ತಿದ್ದರು. ಜಮೀನಿನಲ್ಲಿ ಉಳುಮೆ ಮಾಡುತ್ತಿದ್ದಾಗ ಟ್ರ್ಯಾಕ್ಟರ್‌ನಿಂದ ಬಿದ್ದ ಭವಿಷ್ ರೊಟಾವೆಲ್ಟರ್‌ಗೆ ಸಿಲುಕಿ ಈ ಅವಘಡ ಸಂಭವಿಸಿದೆ.

ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!