ರಾಜ್ಯ ರಾಜಧಾನಿಯಲ್ಲಿ ಘೋರ ದುರಂತ: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಿನ ಯಲಹಂಕದ ಸಿಂಗನಾಯಕನಹಳ್ಳಿಯ ಯಡಿಯೂರಪ್ಪ ನಗರದಲ್ಲಿ ಒಂದೇ ಕುಟುಂಬದ ನಾಲ್ವರು ಮನೆಯಲ್ಲಿ ಸಾವಿಗೆ ಶರಣಾಗಿರುವ ದಾರುಣ ಘಟನೆ ನಡೆದಿದೆ.

ಮೃತರನ್ನು 38 ವರ್ಷದ ಅವಿನಾಶ್, ಪತ್ನಿ ಮಮತಾ (30) ಮಗಳಾದ ಅಧೀರಾ (5), ಅಣ್ಣಯ್ಯ ಎರಡೂವರೆ ವರ್ಷದ ಮಗು ಎಂದು ಗುರುತಿಸಲಾಗಿದೆ.

ಮೊದಲಿಗೆ ಮಕ್ಕಳನ್ನು ಸಾಯಿಸಿದ ತಾಯಿ ಸಾವಿಗೆ ಶರಣಾಗಿದ್ದಾರೆ ಎನ್ನಲಾಗಿದೆ.

ಕಲಬುರ್ಗಿ ಮೂಲದ ಅವಿನಾಶ್ ಬೆಂಗಳೂರಲ್ಲಿ ಕ್ಯಾಬ್ ಚಾಲಕನಾಗಿ ಕೆಲಸ ಮಾಡುತ್ತಿದ್ದರು. ಕಳೆದ ರಾತ್ರಿ ಮನೆಯಲ್ಲಿ ನಾಲ್ವರು ಪ್ರಾಣ ಕಳೆದುಕೊಂಡಿದ್ದಾರೆ ಎನ್ನಲಾಗಿದೆ. ರಾಜಾನುಕುಂಟೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪ್ರಾಥಮಿಕ ತನಿಖೆಯಲ್ಲಿ ಇಬ್ಬರು ಮಕ್ಕಳನ್ನು ತಾಯಿಯೇ ಕತ್ತು ಹಿಸುಕಿ ಸಾಯಿಸಿದ್ದಾರೆ. ಮನೆಗೆ ಬಂದ ಗಂಡ ಅವಿನಾಶ್, ಹೆಂಡತಿ ಇಬ್ಬರು ಮಕ್ಕಳು ಜೀವ ಬಿಟ್ಟಿರೋದನ್ನ ನೋಡಿದ್ದಾರೆ. ಅನಂತರ ಆತನೂ ಕೂಡ ಸಾವಿಗೆ ಶರಣಾಗಿದ್ದಾನೆ ಎಂದು ತಿಳಿದು ಬಂದಿದೆ.

ನಾಲ್ವರ ದುರಂತ ಸಾವಿಗೆ ಕಾರಣವೇನು?
ಅವಿನಾಶ್, ಮಮತಾ ದಂಪತಿಯ ಈ ದುರಂತ ಸಾವಿಗೆ ಹಣಕಾಸಿನ ಸಮಸ್ಯೆ ಕಾರಣ ಇರಬಹುದು ಎಂದು ಶಂಕಿಸಲಾಗಿದೆ. ಗಂಡನ ಆರ್ಥಿಕ ಸಂಕಷ್ಟದಿಂದ ಪತ್ನಿ ಈ ನಿರ್ಧಾರ ಮಾಡಿರಬಹುದು ಎನ್ನಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!