ಭೀಕರ ಅಪಘಾತ: ಇಬ್ಬರು ಮಹಿಳೆಯರು ಸೇರಿದಂತೆ ಒಂದೇ ಕುಟುಂಬದ ಐವರ ಸಾವು!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಮಹಾಶಿವರಾತ್ರಿ ದಿನವಾದ ಇಂದು ಮುಂಜಾನೆ ತಮಿಳುನಾಡಿನ ಕರೂರ್ ಜಿಲ್ಲೆಯ ಕುಳಿತ್ತಲೈ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದಾರೆ.

ತಂಜಾವೂರು ಜಿಲ್ಲೆಯ ಒರತನಾಡು ಸಮೀಪದ ಒಕ್ಕನಾಡು ಕೀಲಯೂರಿನ ದೇವಸ್ಥಾನವೊಂದಕ್ಕೆ ಚಾಲಕನೊಂದಿಗೆ ಒಂದೇ ಕುಟುಂಬದ ನಾಲ್ವರು ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ.

ತಿರುಚ್ಚಿ-ಕರೂರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಕುಳಿತಲೈ ಬಳಿ ಮುಂಜಾನೆ 2:15 ರ ಸುಮಾರಿಗೆ ಅಪಘಾತ ಸಂಭವಿಸಿದೆ. ಅಗ್ನಿಶಾಮಕ ಸಿಬ್ಬಂದಿ ಒಂದು ಗಂಟೆಗೂ ಹೆಚ್ಚು ಕಾಲ ಹರಸಾಹಸಪಟ್ಟು ಅವಶೇಷಗಳಡಿ ಸಿಲುಕಿದ್ದ ಮೃತದೇಹಗಳನ್ನು ಹೊರತೆಗೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಎಂ.ತಂಗವೇಲ್ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ಕೆ.ಫಿರೋಜ್ ಖಾನ್ ಅಬ್ದುಲ್ಲಾ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!