ಹಾಸನದಲ್ಲಿ ದಾರುಣ ಘಟನೆ: ವರದಕ್ಷಿಣೆ ಕಿರುಕುಳಕ್ಕೆ ಗೃಹಿಣಿ ಬಲಿ

ಹೊಸದಿಗಂತ ಹಾಸನ:

ವರದಕ್ಷಿಣೆ ಕಿರುಕುಳಕ್ಕೆ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ಉಳಿಗೆರೆ ಗ್ರಾಮದಲ್ಲಿ ನಡೆದಿದೆ.

ಸಂಗೀತ (26) ಮೃತ ಮಹಿಳೆ. ಕೆ.ಆರ್.ಪೇಟೆ ತಾಲ್ಲೂಕಿನ, ನಾಟನಹಳ್ಳಿ ಗ್ರಾಮದವರು. ಕಳೆದ ನಾಲ್ಕು ವರ್ಷದ ಹಿಂದೆ ಮೃತ ಸಂಗೀತ ಹಾಗೂ ಉಳಿಗೆರೆ ಗ್ರಾಮದ ಕಿರಣ್ ಮದುವೆಯಾಗಿದ್ದರು. ಕಿರಣ್ ಮನೆಯವರಿಂದ ಪದೇ ಪದೇ ವರದಕ್ಷಿಣೆ ತರುವಂತೆ ಕಿರುಕುಳ‌ ನೀಡುತ್ತಿದ್ದರು ಎಂದು ಸಂಗೀತ ಪೋಷಕರು ಆರೋಪ ಮಾಡಿದ್ದು, ಕಿರಣ್ ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಸಂಗೀತ ಸಾವನ್ನಪ್ಪಿದ್ದಾರೆ.

ವರದಕ್ಷಿಣೆಗಾಗಿಯೇ ಹಲ್ಲೆ ನಡೆಸಿ ನೇಣುಬಿಗಿದು ಕೊಲೆ ಮಾಡಿದ್ದಾರೆ ಎಂದು ಮೃತಳ ಪೋಷಕರು ಆರೋಪ ಮಾಡಿದ್ದಾರೆ. ಕೂಡಲೇ ಆರೋಪಿಗಳನ್ನು ಬಂಧಿಸುವಂತೆ ಪೊಷಕರು ಆಗ್ರಹಿಸಿದ್ದಾರೆ.

ಚನ್ನರಾಯಪಟ್ಟಣ ತಾಲೂಕಿನ ಹಿರಿಸಾವೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!