April 19, 2026
Sunday, April 19, 2026
spot_img

ಯಾದಗಿರಿಯಲ್ಲಿ ಭೀಭತ್ಸ್ಯ ಘಟನೆ: ಜಮೀನು ವಿವಾದ ಯುವಕನ ಕೊ*ಲೆಯಲ್ಲಿ ಪರ್ಯಾವಸಾನ

ಹೊಸದಿಗಂತ ವರದಿ ಯಾದಗಿರಿ:

ಜಮೀನಿಗೆ ಸಂಪರ್ಕ ಕಲ್ಪಿಸುವ ದಾರಿ ವಿಚಾರದ ಕುಟುಂಬದೊಳಗಿನ ಗಲಾಟೆ ಭೀಕರ ತಿರುವು ಪಡೆದಿದ್ದು, ಯುವಕನ ಹತ್ಯೆ ಮಾಡಲಾಗಿದೆ.
ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಮಾವಿನಮಟ್ಟಿ ಗ್ರಾಮದಲ್ಲಿ ಘಟನೆ ನಡೆದಿದೆ.

ಸೋಮವಾರ ರಾತ್ರಿ ಈ ಘಟನೆ ನಡೆದಿದ್ದು ಮೃತ ಯುವಕನನ್ನು ಪರಮೇಶಿ ತಂದೆ ಮಲ್ಲಣ್ಣ ಗಿಂಡಿ (27) ಎಂದು ಗುರುತಿಸಲಾಗಿದೆ. ಜಮೀನಿನ ದಾರಿ ವಿಚಾರವಾಗಿ ಕುಟುಂಬದೊಳಗೆ ಹುಟ್ಟಿಕೊಂಡಿದ್ದ ವೈಷಮ್ಯ ಕ್ಷುಲ್ಲಕ ಕಾರಣದಿಂದಾಗಿ , ನಂತರ ಕೊಲೆ ಮಾಡುವ ಹಂತಕ್ಕೆ ತಲುಪಿದೆ. ಮಾರಕಾಸ್ತ್ರಗಳನ್ನು ಬಳಸಿಕೊಂಡು ಆರೋಪಿಗಳು ಪರಮೇಶಿ ಮೇಲೆ ದಾಳಿ ನಡೆಸಿದ್ದು, ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಕೆಂಭಾವಿ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !