ಕಾರ್ಪೋರೇಟರ್‌ ಪುತ್ರಿಯ ಭೀಕರ ಹತ್ಯೆ: ಆರೋಪಿಯನ್ನು ಗಲ್ಲಿಗೇರಿಸಲು ಎಬಿವಿಪಿ ಆಗ್ರಹ

ದಿಗಂತ ವರದಿ ಹುಬ್ಬಳ್ಳಿ:

ವಿದ್ಯಾನಗರದ ಬಿವಿಬಿ ಕಾಲೇಜಿನ ಆವರಣದಲ್ಲಿ ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಹುಬ್ಬಳ್ಳಿ ಮಹಾನಗರ ವತಿಯಿಂದ ಶುಕ್ರವಾರ ಕಾಲೇಜುಗಳ ಬಂದಗೆ ಕರೆ ನೀಡಲಾಗಿದೆ.


ಗುರುವಾರ ನೇಹಾ ಹಿರೇಮಠ ಎಂಬ ವಿದ್ಯಾರ್ಥಿನಿಯನ್ನು ಫಯಾಜ್ ಎಂಬಾತ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದ. ವಿದ್ಯಾನಗರದ ಪೊಲೀಸ್ ತಕ್ಷಣ ಆರೋಪಿಯನ್ನು ಬಂಧಿಸಿದ್ದರು. ವಿದ್ಯಾರ್ಥಿ ಕೊಲೆ ಮಾಡಿರುವುದನ್ನು ಖಂಡಿಸಿ ಗುರುವಾರ ರಾತ್ರಿ ಎಬಿವಿಪಿ ಸಂಘಟನೆ ಪ್ರತಿಭಟನೆ ನಡೆಸಿ ಆರೋಪಿ ಗಲ್ಲು ಶಿಕ್ಷೆ ವಿಧಿಸಲು ಆಗ್ರಹಿಸಿದ್ದರು. ಜನಪ್ರತಿನಿಧಿಗಳು ಕಿಮ್ಸ್ ಆಸ್ಪತ್ರೆ ಭೇಟಿ ನೀಡಿ ಕೃತ್ಯವನ್ನು ಖಂಡಿಸಿದ್ದರು. ಹಿಂದೂಪರ ಸಂಘಟನೆ ವಿದ್ಯಾನಗರದ ಪೊಲೀಸ್ ಠಾಣೆ ಮುತ್ತಿಗೆ ಪ್ರತಿಭಟನೆ ಸಹ ನಡೆಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!