August 14, 2026
Friday, August 14, 2026
spot_img

ಎಲ್ಲಾ ಕಡೆ ಬಿಸಿ… ಬಿಸಿ…! ದೇಶಾದ್ಯಂತ ಬಿಸಿಗಾಳಿ ತೀವ್ರ: ರಾಜಧಾನಿಯಲ್ಲಿ 41°C ತಾಪಮಾನ, ದಕ್ಷಿಣ ರಾಜ್ಯಗಳಿಗೂ ಎಚ್ಚರಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೇಶದಾದ್ಯಂತ ಬೇಸಿಗೆಯ ಬಿಸಿಲು ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದ್ದು, ಮುಂದಿನ ಕೆಲ ದಿನಗಳಲ್ಲಿ ಉಷ್ಣ ಅಲೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲೇ ತಾಪಮಾನ ಏಪ್ರಿಲ್ 17ರ ವೇಳೆಗೆ 41 ಡಿಗ್ರಿ ಸೆಲ್ಸಿಯಸ್ ತಲುಪುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ.

ಐಎಂಡಿ ಮಾಹಿತಿ ಪ್ರಕಾರ, ವಾಯುವ್ಯ ಭಾರತದಲ್ಲಿ ಏಪ್ರಿಲ್ 18ರವರೆಗೆ ಗರಿಷ್ಠ ತಾಪಮಾನ 4ರಿಂದ 6 ಡಿಗ್ರಿವರೆಗೆ ಏರಿಕೆಯಾಗಬಹುದು. ಗುಜರಾತ್ ಮತ್ತು ಮಹಾರಾಷ್ಟ್ರದಲ್ಲೂ ಬಿಸಿಲಿನ ತೀವ್ರತೆ ಹೆಚ್ಚಾಗಲಿದೆ.

ಇದನ್ನೂ ಓದಿ:

ಒಡಿಶಾ, ಗುಜರಾತ್ ಹಾಗೂ ಕರಾವಳಿ ಆಂಧ್ರ ಪ್ರದೇಶದಲ್ಲಿ ಮುಂದಿನ ಏಳು ದಿನಗಳು ಉಷ್ಣ ಅಲೆ ಪರಿಸ್ಥಿತಿ ಮುಂದುವರಿಯುವ ನಿರೀಕ್ಷೆಯಿದೆ. ಕರ್ನಾಟಕ, ಕೇರಳ ಮತ್ತು ದಕ್ಷಿಣ ಭಾರತದ ಕೆಲವು ಭಾಗಗಳಲ್ಲಿಯೂ ತೀವ್ರ ಬಿಸಿ ವಾತಾವರಣ ಕಾಣಿಸಿಕೊಳ್ಳಲಿದೆ ಎಂದು ಇಲಾಖೆ ತಿಳಿಸಿದೆ.

ಜನರು ಮಧ್ಯಾಹ್ನ ಸಮಯದಲ್ಲಿ ಹೊರಗೆ ಹೋಗುವುದನ್ನು ತಪ್ಪಿಸಿ, ಹೆಚ್ಚು ನೀರು ಸೇವಿಸುವಂತೆ ಹವಾಮಾನ ಇಲಾಖೆ ಸಲಹೆ ನೀಡಿದೆ. ಉಷ್ಣ ಅಲೆಯ ನಡುವೆ ಆರೋಗ್ಯದ ಬಗ್ಗೆ ಹೆಚ್ಚಿನ ಎಚ್ಚರಿಕೆ ಅಗತ್ಯವಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !