ಹೊಸದಿಗಂತ ವರದಿ, ಮಡಿಕೇರಿ:
ಕಳೆದ 12 ದಿನಗಳಿಂದ ಧಾರಾಕಾರವಾಗಿ ಸುರಿದ ಮಳೆಗೆ ಮಡಿಕೇರಿಯ ಮಲ್ಲಿಕಾರ್ಜುನ ನಗರದಲ್ಲಿ ಮನೆಯೊಂದು ಕುಸಿದಿದೆ.
ಮಲ್ಲಿಕಾರ್ಜುನ ನಗರದ ಗೋಪಾಲ ಎಂಬವರಿಗೆ ಸೇರಿದ ಮನೆ ಇದಾಗಿದ್ದು, ಕೊಡಗಿನ ಮಳೆಹಾನಿ ಪರಿಶೀಲನೆಗಾಗಿ ಆಗಮಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಮನೆಯನ್ನು ವೀಕ್ಷಿಸಿದರು.
ಬಳಿಕ ಗೋಪಾಲ ಕುಟುಂಬದವರಿಗೆ 95,100 ರೂ.ಗಳ ಚೆಕ್ ವಿತರಿಸಿದರು.
ಈ ಸಂದರ್ಭದಲ್ಲಿ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ನಾಗೇಶ್, ಕಂದಾಯ ಸಚಿವ ಆರ್.ಅಶೋಕ್, ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್, ಸಂಸದ ಪ್ರತಾಪ್ ಸಿಂಹ, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಮತ್ತಿತರರು ಇದ್ದರು.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ