ನಿರಂತರ ಮಳೆಗೆ ಕುಸಿದು ಬಿತ್ತು ಮನೆ: ಒಂದೂವರೆ ವರ್ಷದ ಕಂದಮ್ಮ ಸಾವು, ಉಳಿದವರು ಆಸ್ಪತ್ರೆಗೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಕೊಪ್ಪಳ ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಗೆ ಮನೆ ಕುಸಿದು ಒಂದೂವರೆ ವರ್ಷದ ಮಗು ಸಾವನ್ನಪ್ಪಿರುವ ಘಟನೆ ಗಂಗಾವತಿ ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ನಡೆದಿದೆ.

ಪ್ರಶಾಂತಿ ಮೃತ ಮಗು. ಗಾಯಾಳುಗಳನ್ನು ಹನುಮಂತಿ (28), ದುರಗಮ್ಮ(65), ಭೀಮಮ್ಮ (19), ಹುಸೇನಪ್ಪ(46), ಫಕೀರಪ್ಪ ಎಂದು ಗುರುತಿಸಲಾಗಿದೆ.

ಬುಧವಾರ ಜಿಲ್ಲೆಯಲ್ಲಿ ಸುರಿದ ನಿರಂತರ ಮಳೆಯಿಂದಾಗಿ ಮನೆ ಕುಸಿದ ಪರಿಣಾಮ ಮನೆಯಲ್ಲಿದ್ದ ಮಗು ಸಾವನ್ನಪ್ಪಿದ್ದು, ಇನ್ನುಳಿದ ಆರು ಜನರು ಗಾಯಗೊಂಡಿದ್ದಾರೆ. ಸದ್ಯ ಗಾಯಾಳುಗಳನ್ನು ಗಂಗಾವತಿ ತಾಲೂಕಾಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಸ್ಥಳಕ್ಕೆ ತಹಶೀಲ್ದಾರ್ ಯು.ನಾಗರಾಜ್ ಹಾಗೂ ಗಂಗಾವತಿ ಗ್ರಾಮೀಣ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!