ಬೊಗಳುವ ಎಲ್ಲಾ ನಾಯಿಗೂ ಕಲ್ಲು ಹೊಡೆಯುತ್ತಾ ಕೂತರೆ ಹೇಗೆ? ಜಸ್ಪ್ರೀತ್ ಬುಮ್ರಾ ಹೀಗೆ ಹೇಳಿದ್ದೇಕೆ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಗಾಯದ ಕಾರಣ ವಿಶ್ವಕಪ್ ತಂಡದಿಂದ ಜಸ್ಪ್ರೀತ್ ಬುಮ್ರಾ ಹೊರಗುಳಿದಿದ್ದು, ಟ್ರೋಲ್‌ಗಳಿಗೆ ಹೆಚ್ಚೇ ಗುರಿಯಾಗಿದ್ದಾರೆ.

ಟ್ರೋಲ್‌ಗಳಿಗೆ ಖಡಕ್ ಆಗಿ ಉತ್ತರ ಕೊಟ್ಟಿರೋ ಬುಮ್ರಾ ಉನ್ನತ ಸ್ಥಾನಕ್ಕೆ ತಲುಪಬೇಕೆಂದರೆ, ಬೊಗಳುವ ಎಲ್ಲಾ ನಾಯಿಗೆ ಕಲ್ಲು ಹೊಡೆಯುವುದನ್ನು ನಿಲ್ಲಿಸಬೇಕು ಎಂದಿದ್ದಾರೆ. ಇಂಗ್ಲೆಂಡ್ ಪ್ರಧಾನಿ ವಿನ್‌ಸ್ಟನ್ ಚರ್ಚಿಲ್ ಅವರ ಹೇಳಿಕೆಯನ್ನು ಉಲ್ಲೇಖಿಸಿ ಹೇಳಿದ್ದಾರೆ.

ಬೆನ್ನುಮೂಳೆ ಮುರಿತದಿಂದ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ವಿಶ್ವಕಪ್‌ನಿಂದ ಬೂಮ್ರಾ ಹೊರಬಿದ್ದಿದ್ದಾರೆ. ಹಲವು ತಿಂಗಳಿನಿಂದ ಹೊರಗಿದ್ದ ಬೂಮ್ರಾ ಆಸ್ಟ್ರೇಲಿಯಾ ಸರಣಿಗೂ ಮುನ್ನ ತಂಡ ಸೇರಿದ್ದರು. ಸಂಪೂರ್ಣವಾಗಿ ಗುಣಮುಖರಾಗದ ಕಾರಣ ಇದೀಗ ವಿಶ್ವಕಪ್‌ನಿಂದ ಗೇಟ್‌ಪಾಸ್ ಸಿಕ್ಕಿದೆ. ಈ ವರ್ಷ ಕೇವಲ ೧೫ ಅಂತಾರಾಷ್ಟ್ರಿಯ ಪಂದ್ಯಗಳನ್ನು ಮಾತ್ರ ಬೂಮ್ರಾ ಆಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!