Monday, October 2, 2023

Latest Posts

ಜನರಿಗೆ ಸಾಂತ್ವನ ಹೇಳುವುದನ್ನು ಶೋ-ಆಫ್ ಎಂದು ಹೇಗೆ ಕರೆಯುವಿರಿ?: ಬಿಜೆಪಿ ವಿರುದ್ದ ಸಂಜಯ್ ರಾವುತ್ ಕಿಡಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಮಣಿಪುರ ಭೇಟಿ ನೀಡಿದ ವಿರೋಧ ಪಕ್ಷಗಳ ಒಕ್ಕೂಟ INDIA ಸಂಸದರ ಅನ್ನು ‘ಶೋ-ಆಫ್’ ಎಂದಿದ್ದ ಬಿಜೆಪಿ ವಿರುದ್ದ ಶಿವಸೇನಾ (ಯುಬಿಟಿ) ನಾಯಕ ಸಂಜಯ್ ರಾವುತ್ ಭಾನುವಾರ ವಾಗ್ದಾಳಿ ನಡೆಸಿದ್ದಾರೆ.

ಮಣಿಪುರದಲ್ಲಿ 200ಕ್ಕೂ ಹೆಚ್ಚು ಜನರು ಸಾವಿಗೀಡಾಗಿದ್ದಾರೆ. ಸಚಿವರು ಮತ್ತು ಶಾಸಕರ ಮನೆಗಳನ್ನು ಸುಟ್ಟುಹಾಕಲಾಗಿದೆ ಮತ್ತು ಕೆಲವು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಲಾಗಿದೆ. ಆದರೂ, ಪ್ರಧಾನಿ ಮಣಿಪುರಕ್ಕೆ ಹೋಗಿಲ್ಲ ಮತ್ತು ಸಂಸತ್ತಿನಲ್ಲಿ ಇನ್ನೂ ಈ ವಿಷಯದ ಬಗ್ಗೆ ಮಾತನಾಡಿಲ್ಲ ಎಂದರು.

ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾವುತ್, ಅವರ ಮಾತನ್ನು ಕೇಳಿ. ಅದಕ್ಕಾಗಿಯೇ INDIA ಒಕ್ಕೂಟದ ಸಂಸದರ ನಿಯೋಗ ರಾಜ್ಯಕ್ಕೆ ಭೇಟಿ ನೀಡಿತ್ತು. ನಾಗರಿಕರ ದುಃಖವನ್ನು ಅರ್ಥಮಾಡಿಕೊಳ್ಳುವುದು ಮತ್ತು ಅವರಿಗೆ ಸಾಂತ್ವನ ಹೇಳುವುದನ್ನು ಶೋ-ಆಫ್ ಎಂದು ಹೇಗೆ ಕರೆಯುವಿರಿ?’ ಎಂದು ಅವರು ಪ್ರಶ್ನಿಸಿದರು.

ವಿರೋಧ ಪಕ್ಷದ ನಾಯಕರು ಸಂತ್ರಸ್ತ ನಾಗರಿಕರೊಂದಿಗೆ ಮಾತನಾಡಿ, ಅವರ ಸಮಸ್ಯೆಗಳನ್ನು ಅರ್ಥಮಾಡಿಕೊಂಡಿದ್ದಾರೆ. ಇದನ್ನು ಶೋ-ಆಫ್ ಎಂದು ಕರೆದರೆ, ಇದಕ್ಕಿಂತ ಕ್ರೂರ ಸರ್ಕಾರ ಮತ್ತು ರಾಜಕೀಯವನ್ನು ನಾವು ನೋಡಿಲ್ಲ’ ಎಂದು ರಾವುತ್ ಆರೋಪಿಸಿದ್ದಾರೆ.

ಮಣಿಪುರದ ಪರಿಸ್ಥಿತಿ ಕುರಿತು ಅವಲೋಕಿಸಲು ಮತ್ತು ಮೇ 3ರಂದು ಈಶಾನ್ಯ ರಾಜ್ಯದಲ್ಲಿ ಉಂಟಾದ ಜನಾಂಗೀಯ ಘರ್ಷಣೆಯ ಸಂತ್ರಸ್ತರನ್ನು ಭೇಟಿ ಮಾಡಲು ಹಲವಾರು ಪರಿಹಾರ ಶಿಬಿರಗಳಿಗೆ ಭೇಟಿ ನೀಡಲು ವಿರೋಧ ಪಕ್ಷಗಳ ಒಕ್ಕೂಟವಾದ INDIA ದ 21 ಸಂಸದರ ನಿಯೋಗ ಶನಿವಾರ ಇಂಫಾಲ್ ತಲುಪಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!