ಹೊಸದಿಗಂತ ಡಿಜಿಟಲ್ ಡೆಸ್ಕ್
ಮಂಗಳೂರು ಕುಕ್ಕರ್ ಬ್ಲಾಸ್ಟ್ ಆರೋಪಿಯನ್ನು ಹೇಗೆ ಭಯೋತ್ಪಾದಕ ಎಂದು ಪೊಲೀಸರು ಘೋಷಿಸಿದರು ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ.
ಮಂಗಳೂರಿನಲ್ಲಿ ನಡೆದಿದ್ದು ಮುಂಬೈನಲ್ಲಿ ನಡೆದಂಥ ಟೆರರಿಸ್ಟ್ ದಾಳಿಯೇ? ಕಾಶ್ಮೀರದ ಪುಲ್ವಾಮಾ ದಾಳಿಯಂಥ ಘಟನೆಯಾ ಅದು? ಪೊಲೀಸ್ ಅಧಿಕಾರಿಗಳು ಅಷ್ಟು ಬೇಗ ಟ್ವೀಟ್ ಮಾಡಿ ಮಾಹಿತಿ ನೀಡಿದ್ದರ ಹಿನ್ನೆಲೆ ಏನು ಎಂದು ಡಿ.ಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ .
ಶಿವಕುಮಾರ್ ಅವರ ಈ ಹೇಳಿಕೆಗೆ ಬಿಜೆಪಿ ಮುಖಂಡರು ತೀಕ್ಷ್ಣವಾಗಿ ಪ್ರತಿಕ್ರಿಯಿಸುತ್ತಿದ್ದಾರೆ.ಡಿ ಕೆ ಶಿವಕುಮಾರ್ ಅವರು ಕುಕ್ಕರ್ ಬಾಂಬ್ ಸ್ಫೋಟದ ಕುರಿತು ನೀಡಿರುವ ಹೇಳಿಕೆಗೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.