ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಷ್ಟ್ರೀಯ ಜನತಾ ದಳ (ಆರ್ಜೆಡಿ) ಅಧ್ಯಕ್ಷ ಲಾಲು ಪ್ರಸಾದ್ ಯಾದವ್ ಆರೋಗ್ಯ ಚೇತರಿಸಿಕೊಳ್ಳುತ್ತಿದ್ದು, ಈ ಬಗ್ಗೆ ಅವರ ಹಿರಿಯ ಪುತ್ರಿ ಮಿಸಾ ಭಾರತಿ ಮಾಹಿತಿ ನೀಡಿದ್ದಾರೆ.
ಆಸ್ಪತ್ರೆಯಲ್ಲಿ ಲಾಲು ಅವರು ಚೇತರಿಸಿಕೊಳ್ಳುತ್ತಿರುವ ಫೋಟೋಗಳನ್ನು ಹಂಚಿಕೊಂಡಿದ್ದು, ತನ್ನ ತಂದೆಯ ಆರೋಗ್ಯ ಸ್ಥಿತಿ ಉತ್ತಮವಾಗಿದೆ. ಅವರು ಈಗ ಯಾರೊಬ್ಬರ ಬೆಂಬಲದೊಂದಿಗೆ ಕುಳಿತುಕೊಳ್ಳುವಷ್ಟು ಸಾಮರ್ಥ್ಯ ಹೊಂದಿದ್ದಾರೆ. ಚಿಂತಿಸಬೇಡಿ, ಅವರು ಚಿಕಿತ್ಸೆ ಪಡೆಯುತ್ತಿದ್ದು, ಶೀಘ್ರವಾಗಿ ಚೇತರಿಸಿಕೊಳ್ಳಲು ಎಲ್ಲರೂ ಪ್ರಾರ್ಥಿಸಿ ಎಂದು ಟ್ವೀಟ್ನಲ್ಲಿ ಬರೆದಿದ್ದಾರೆ.
अपने मनोबल और आप सब की दुआओं की बदौलत लालू जी की स्थिति अब काफी बेहतर है। कृपया अफवाहों पर ध्यान ना दें। साथ बनाए रखें, दुआओं में @laluprasadrjd जी को याद रखें।
धन्यवाद।तस्वीरें आज सुबह की: pic.twitter.com/RvcEbqcJRB
— Dr. Misa Bharti (@MisaBharti) July 8, 2022
ಏಮ್ಸ್ನಲ್ಲಿರುವ ಲಾಲು ಅವರನ್ನು ಸಂಬಂಧಿಕರನ್ನು ಹೊರತುಪಡಿಸಿ, ಅನೇಕ ರಾಜಕಾರಣಿಗಳು ಭೇಟಿ ಮಾಡಲು ಬಂದಿದ್ದರು. ಆದರೆ ವೈದ್ಯರು ಹೆಚ್ಚು ವಿಶ್ರಾಂತಿ ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ. ವೈದ್ಯರ ಪ್ರಕಾರ, ಬುಧವಾರಕ್ಕೆ ಹೋಲಿಸಿದರೆ ಲಾಲು ಪ್ರಸಾದ್ ಹೆಚ್ಚು ನಿರಾಳರಾಗಿದ್ದಾರೆ. ಇನ್ನೆರಡು ದಿನಗಳಲ್ಲಿ ಐಸಿಯುನಿಂದ ಜನರಲ್ ವಾರ್ಡ್ಗೆ ಕರೆತರುವ ಸಾಧ್ಯತೆ ಇದೆ.
ಜು.7 ರಂದು ರಾತ್ರಿ ಪಾಟ್ನಾ ಆಸ್ಪತ್ರೆಯಿಂದ ಏರ್ಲಿಫ್ಟ್ ಮೂಲಕ ಲಾಲು ಅವರನ್ನು ದೆಹಲಿಯ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (AIIMS) ಗೆ ದಾಖಲಿಸಲಾಗಿತ್ತು. ಲಾಲು ಅವರು ನಿವಾಸದಲ್ಲಿ ಬಿದ್ದು ಬಲ ಭುಜದ ಮೂಳೆ ಮುರಿತಕ್ಕೆ ಒಳಗಾಗಿದ್ದಾರೆ. ಕಿಡ್ನಿ ಮತ್ತು ಶ್ವಾಸಕೋಶದ ಸೋಂಕು ಹಾಗೂ ರಕ್ತದೊತ್ತಡ ಸಮಸ್ಯೆಯಿಂದ ಲಾಲು ಬಹಳ ದಿನಗಳಿಂದ ಬಳಲುತ್ತಿದ್ದಾರೆ.