ಹೇಗಿದೆ ರಾಜ್ಯದ ಇಂದಿನ ಹವಾಮಾನ? ಸುಡು ಬೇಸಿಗೆಯಲ್ಲಿ ತಂಪೆರೆಯಲಿದೆಯಾ ಮಳೆ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮುಂದಿನ 24 ತಾಸುಗಳ ಅವಧಿಯಲ್ಲಿ ರಾಜ್ಯದ ಒಳನಾಡಿನ ಒಂದೆರಡು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಮದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನು ಕರಾವಳಿ ಭಾಗದಲ್ಲಿ ಒಣಹವೆ ಮುಂದುವರಿಯಲಿದೆ. ಬಾಗಲಕೋಟೆ, ಬೆಂಗಳೂರು ಗ್ರಾಮಾಂತರ ಹಾಗೂ ಮೈಸೂರು ಜಿಲ್ಲೆಗಳಲ್ಲಿ ಇಂದು ತಾಪಮಾನವು ಸಾಮಾನ್ಯಕ್ಕಿಂತ ಎರಡು ಡಿಗ್ರಿ ಹೆಚ್ಚು ದಾಖಲಾಗುವ ಸಾಧ್ಯತೆ ಇದೆ.

ಬೆಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣ ಕಾಣಿಸಿಕೊಳ್ಳಲಿದ್ದು, ಉಷ್ಣಾಂಶವು ಗರಿಷ್ಠ ೩೫ ಹಾಗೂ ಕನಿಷ್ಠ 21 ಡಿಗ್ರಿ ಸೆಲಿಯೆಸ್ ದಾಖಲಾಗುವ ಸಾಧ್ತೆ ಇದೆ ಎಂದು ಇಲಾಖೆ ಹೇಳಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!