ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಧಾನಸಭಾ ಚುನಾವಣೆಗೆ ಮತದಾನ ಇನ್ನೇನು ಕೆಲವೇ ಗಂಟೆಗಳಲ್ಲಿ ಮುಕ್ತಾಯವಾಗಲಿದೆ.
ತಮ್ಮ ಕ್ಷೇತ್ರದಲ್ಲಿ ಮತ ಚಲಾಯಿಸಿದ ಸಿದ್ದರಾಮಯ್ಯ ಮಾಧ್ಯಮದವರೊಂದಿಗೆ ಮಾತನಾಡಿದ್ದಾರೆ. ಈ ಬಾರಿ ಕಾಂಗ್ರೆಸ್ಗೆ ಗೆಲುವು ಖಚಿತ, ಇದರಲ್ಲಿ ಎರಡು ಮಾತಿಲ್ಲ. ಈಗಲೂ ಸಾಕಷ್ಟು ಸಮಯ ಇದೆ, ಎಲ್ಲರೂ ಬಂದು ವೋಟ್ ಮಾಡಿ.
ರಾಜ್ಯಕ್ಕೆ ಯಾವುದೇ ಅಭಿವೃದ್ಧಿ ನೀಡದ ಬಿಜೆಪಿ ಗೆಲ್ಲೋದಿಲ್ಲ, ಈ ಬಾರಿ 130-150 ಸ್ಥಾನಗಳನ್ನು ಕಾಂಗ್ರೆಸ್ ಗಳಿಸಿ ಸರ್ಕಾರ ರಚಿಸಲಿದೆ ಎಂದಿದ್ದಾರೆ.