ಹುಬ್ಬಳ್ಳಿ ಸಿಲಿಂಡರ್‌ ಬ್ಲಾಸ್ಟ್‌ ಪ್ರಕರಣ: ಮತ್ತೊಬ್ಬ ಅಯ್ಯಪ್ಪಮಾಲಾಧಾರಿ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಸಿಲಿಂಡರ್ ಸ್ಫೋಟಗೊಂಡು ತೀರ್ವವಾಗಿ ಗಾಯಗೊಂಡು ಕಿಮ್ಸ್​ಗೆ ದಾಖಲಾಗಿದ್ದ ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟಿದ್ದಾರೆ. ರಾಜು ಮೂಗೇರಿ (16) ಮೃತ ದುರ್ದೈವಿ. ಮೃತರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.

ಡಿಸೆಂಬರ್​ 22ರಂದು ಸಾಯಿನಗರದ ಈಶ್ವರ ದೇವಸ್ಥಾನದಲ್ಲಿ ಸಿಲಿಂಡರ್ ಸ್ಫೋಟಗೊಂಡು 9 ಜನ ಅಯ್ಯಪ್ಪ ಮಾಲಾಧಿಕಾರಿಗಳು ಗಾಯಗೊಂಡಿದ್ದರು. 9 ಜನರನ್ನು ಕಿಮ್ಸ್​ಗೆ ದಾಖಲಾಖಲಿಸಲಾಗಿತ್ತು. ಈಗವರೆಗೆ ಮೂವರು ಮೃತಪಟ್ಟಿದ್ದು, ಆರು ಜನರಿಗೆ ಚಿಕಿತ್ಸೆ ಮುಂದುವರೆದಿದೆ.

ಹುಬ್ಬಳ್ಳಿಯ ಉಣಕಲ್ ಸಮೀಪ ಇರುವ ಅಚ್ಚವ್ಚನ ಕಾಲೋನಿಯಲ್ಲಿ ಡಿಸೆಂಬರ್​ 22 ರಂದು ಬೆಳಗಿನ ಜಾವ ಸಿಲಿಂಡರ್ ಸ್ಪೋಟಗೊಂಡು 9 ಜನ ಮಾಲಾಧಾರಿಗಳು ಗಾಯಗೊಂಡಿದ್ದರು. 9 ಜನರಿಗೆ ಹುಬ್ಬಳ್ಳಿಯ‌ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗತಿತ್ತು. ಬೆಂಗಳೂರಿನಿಂದ ತಜ್ಞ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಗುರುವಾರ (ಡಿ.26) ಚಿಕಿತ್ಸೆ ಫಲಿಸದೆ ಇಬ್ಬರು ಮೃತಪಟ್ಟಿದ್ದರು. ಇಂದು (ಡಿ.27) ಮತ್ತೊಬ್ಬ ಅಯ್ಯಪ್ಪ ಮಾಲಧಾರಿ ಸಾವಿಗೀಡಾಗಿದ್ದಾರೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!