ಹರ್ಷ ಹತ್ಯೆ ಖಂಡಿಸಿ ಹುಬ್ಬಳ್ಳಿಯಲ್ಲಿ ಹಿಂದು ಪರ ಸಂಘಟನೆಗಳ ಬೃಹತ್‌ ಪ್ರತಿಭಟನೆ

ಹೊಸದಿಗಂತ ವರದಿ, ಹುಬ್ಬಳ್ಳಿ:

ಶಿವಮೊಗ್ಗದಲ್ಲಿ ಹಿಂದೂ ಕಾರ್ಯಕರ್ತನ ಹತ್ಯೆಯನ್ನು ಖಂಡಿಸಿ ವಿಶ್ವ ಹಿಂದೂ ಪರಿಷತ್, ಬಜರಂಗದಳ, ರಾಷ್ಟ್ರೀಯ ಸ್ವಯಂ ಸೇವಕ ಸಂಘ ಹಾಗೂ ಬಿಜೆಪಿ ವತಿಯಿಂದ ಇಲ್ಲಿಯ ಸಂಗೊಳಿ ರಾಯಣ್ಣ ವೃತ್ತದಲ್ಲಿ ಬೃಹತ್ ಪ್ರತಿಭಟನೆ ಮಾಡಲಾಯಿತು. ರಾಜ್ಯದಲ್ಲಿ ಹಿಂದೂಪರ ಸಂಘಟನೆಗಳ ಕಾರ್ಯಕರ್ತರ ಮೇಲೆ ಪದೆ ಪದೇ ಹಲ್ಲೆಗಳು ನಡೆಯುತ್ತಿವೆ. ಸರ್ಕಾರ ಆರೋಪಿಗಳನ್ನು ಬಂಧಿಸುವ ಮೂಲಕ ಇಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳಬೇಕು ಎಂದು ಕಾರ್ಯಕರ್ತರು ಆಗ್ರಹಿಸಿದರು. ಬಡ ಮತ್ತು ಮಧ್ಯಮ ವರ್ಗದ ಯುವಕರ ಮೇಲೆ ನಿರಂತರವಾಗಿ ಹಲ್ಲೆ ಮಾಡುವ ಮೂಲಕ ಅವರ ಕುಟುಂಬಕ್ಕೆ ಆಸರೆಯಿಲ್ಲದಂತೆ ಮಾಡುತ್ತಿದ್ದಾರೆ. ಇಂತಹ ಕೃತ್ಯಗಳಲ್ಲಿ ಭಾಗಿಯಾಗುವ ಆರೋಪಿಗಳಿಗೆ ಶೀಘ್ರವೇ ಶಿಕ್ಷೆಯಾಗುವಂತಹ ಕ್ರಮಗಳನ್ನು ಕೈಗೊಳ್ಳಬೇಕು.‌ ಇಂತಹ ಕೃತ್ಯ ಎಸಗಿರುವ ಸಂಘಟನೆಯನ್ನು ಸರ್ಕಾರ ನಿಷೇಧ ಮಾಡಬೇಕೆಂದು ಒತ್ತಾಯಿಸಿ. ಪ್ರತಿಭಟನೆಯಲ್ಲಿ ಲಕ್ಷ್ಮಣ ಬೀಳಗಿ, ಅಶೋಕ ಅನ್ವೇಕರ್, ಅರುಣ ಶಾಮನೂರ, ಜಯಕರ್ ಕಟ್ಟಿ, ವಿಜಯ ಶಿರಸಾಗರ್, ಮಹಾವೀರ ಘೋಗಿ, ಗೋವರ್ಧನ ರಾವ್, ಸಂಜು ಬಡಾಸ್ಕರ್, ಅರುಣ ಶಾಮನೂರ, ಪ್ರಕಾಶ ಸೇರಿದಂತೆ ಮುಂತಾದವರು ಇದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!