ಹುಬ್ಬಳ್ಳಿ: ಸಾರಿಗೆ ಬಸ್‌ ಟೈರ್‌ ಸ್ಪೋಟಗೊಂಡು ಚಾಲಕ ಸಾವು

ಹೊಸದಿಗಂತ ವರದಿ, ಹುಬ್ಬಳ್ಳಿ:
ರಾಜ್ಯ ರಸ್ತೆ ಸಾರಿಗೆ ಬಸ್ ನ ಮುಂಬಾಗದ ಟೈರ್ ಸ್ಪೋಟಗೊಂಡು ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ಪಲ್ಟಿಯಾಗಿದ್ದು ಬಸ್ ಚಾಲಕ ಸ್ಥಳದಲ್ಲಿ ಮೃತಪಟ್ಟು, 7-8 ಜನರು ಗಾಯಗೊಂಡ ಘಟನೆ ತಾಲೂಕಿನ ಶೇರೆವಾಡ ಕ್ರಾಸ್ ಬಳಿ ಸೋಮವಾರ ಬೆಳಿಗ್ಗೆ ನಡೆದಿದೆ.
ಚಾಲಕ ರೋಣ ತಾಲೂಕ ಉಪ್ಪಿನ ಬೆಟಗೇರಿಯ ರವೀಂದ್ರ ವಿ. ಬಿಂಗಿ (45) ಮೃತಪಟ್ಟವರು. ಗಾಯಗೊಂಡ ನಾಲ್ವರು ಪ್ರಯಾಣಿಕರು ಕಿಮ್ಸ್ ನಲ್ಲಿ ಹಾಗೂ ಇನ್ನುಳಿದವರು ಕುಂದಗೋಳ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಲಕ್ಷ್ಮೇಶ್ವರದಿಂದ ಹುಬ್ಬಳ್ಳಿಗೆ ಬಸ್ ಬರುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಈ ಬಸ್ಸಿನಲ್ಲಿ ವಿದ್ಯಾರ್ಥಿಗಳು ಇದ್ದರು ಎಂದು ಮೂಲಗಳು ತಿಳಿಸಿವೆ. ಘಟನಾ ಸ್ಥಳಕ್ಕೆ ಗ್ರಾಮೀಣ ಠಾಣೆ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಹಾಗೂ ರಾಜ್ಯ ರಸ್ತೆ ಸಾರಿಗೆಯ ಅಧಿಕಾರಿಗಳು ಭೇಟಿ ಕೊಟ್ಟು ಪರಿಶೀಲನೆ ನಡೆಸುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!