ಹುಬ್ಬಳ್ಳಿ ಗಲಭೆ ಪ್ರಕರಣ: ಮಾಸ್ಟರ್ ಮೈಂಡ್ ವಾಸೀಂ ಪಠಾಣ್‌ 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಮಾಸ್ಟರ್ ಮೈಂಡ್ ಎನಿಸಿಕೊಂಡಿರುವ ವಾಸೀಂ ಪಠಾಣ್‌ನನ್ನು 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ನಾಲ್ಕನೇ ಜೆ.ಎಂ.ಎಫ್.ಸಿ ನ್ಯಾಯಾಲಯ ಆದೇಶ ಹೊರಡಿಸಿದೆ.
ಆರೋಪಿಯನ್ನು ಪೊಲೀಸರು 10 ದಿನ್ಕೆ ಪೊಲೀಸ್ ಕಸ್ಟಡಿಗೆ ಕೇಳಿದ್ದರು. ಆದರೆ ನ್ಯಾಯಾಲಯ ಐದು ದಿನಗಳ ಕಾಲ ಕಸ್ಟಡಿಗೆ ಒಪ್ಪಿಸಿದೆ.
ಇಂದು ನ್ಯಾಯಾಧೀಶರೆದುರು ವಾಸಿಂ ಪಠಾಣ್​ನನ್ನು ಹಾಜರುಪಡಿಸಲಾಗಿತ್ತು. ಈತನ ಜೊತೆ ಆರೋಪಿ ತೌಫಿಲ್​ ಕೂಡಾ ಹಾಜರಾಗಿದ್ದ. ತೌಫಿಲ್‌ನನ್ನು ಕೂಡ 5 ದಿನ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!