February 21, 2026
Saturday, February 21, 2026
spot_img

ರಾಜ್ಯದ ಅರಣ್ಯಗಳಲ್ಲಿ ಭಾರೀ ಪ್ರಮಾಣದ ಚಿನ್ನ, ಲಿಥಿಯಂ ನಿಕ್ಷೇಪ ಪತ್ತೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯ ಗಣಿ ಮತ್ತು ಭೂವಿಜ್ಞಾನ ಇಲಾಖೆಯು ಚಿನ್ನ ಮತ್ತು ಇತರ ಅಪರೂಪದ ಖನಿಜಗಳ ಅಧ್ಯಯನ ಮತ್ತು ಪರಿಶೋಧನೆ ನಡೆಯುತ್ತಿರುವ 65 ಸ್ಥಳಗಳ ಪಟ್ಟಿಯನ್ನು ಸಿದ್ಧಪಡಿಸಿದೆ.

ಕೊಪ್ಪಳ ಮತ್ತು ರಾಯಚೂರಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಚಿನ್ನ ಮತ್ತು ಲಿಥಿಯಂ ಕಂಡುಬಂದಿದೆ. ಆದರೆ ಈ ಪ್ರದೇಶಗಳು ಸಂರಕ್ಷಿತ ಅರಣ್ಯ ಪ್ರದೇಶಗಳಡಿಯಲ್ಲಿ ಬರುವುದರಿಂದ ನಿಕ್ಷೇಪ ಹೊರತೆಗೆಯುವಿಕೆ ಮತ್ತು ವಿವರವಾದ ಸಂಶೋಧನೆ ಸ್ಥಗಿತಗೊಂಡಿದೆ.

ಮೊದಲ ಬಾರಿಗೆ ಮತ್ತು ಅಪರೂಪದ ಸಂದರ್ಭದಲ್ಲಿ, ಕೊಪ್ಪಳ ಜಿಲ್ಲೆಯ ಅಮ್ರಾಪುರ ಬ್ಲಾಕ್‌ನಲ್ಲಿ ನಾವು ಪ್ರತಿ ಟನ್‌ಗೆ 12-14 ಗ್ರಾಂ ಚಿನ್ನವನ್ನು ಕಂಡುಕೊಂಡಿದ್ದೇವೆ. ಸಾಮಾನ್ಯವಾಗಿ ಅಧ್ಯಯನಗಳು ಮತ್ತು ಗಣಿಗಾರಿಕೆಯ ಸಮಯದಲ್ಲಿ ಇದು ಪ್ರತಿ ಟನ್‌ಗೆ ಸುಮಾರು 2-3 ಗ್ರಾಂ ಚಿನ್ನ ಸಿಗುತ್ತದೆ. ಹಟ್ಟಿ ಚಿನ್ನದ ಗಣಿಯಲ್ಲಿ ಪ್ರತಿ ಟನ್ ಗೆ ಕೇವಲ ಸುಮಾರು 2-2.5 ಗ್ರಾಂ ಸಿಗುತ್ತಿದೆ. ಆದರೆ ಕೊಪ್ಪಳದಲ್ಲಿರುವ ಸ್ಥಳವು ವರ್ಜಿನ್ ಫಾರೆಸ್ಟ್ ಪ್ಯಾಚ್‌ನಲ್ಲಿದೆ ಮತ್ತು ನಾವು ಅರಣ್ಯ ತೆರವಿಗೆ ಅನುಮತಿ ಕೋರಿ ಅರ್ಜಿ ಸಲ್ಲಿಸಿದ್ದೇವೆ ಎಂದು ಇಲಾಖೆಯ ಮೂಲಗಳು ತಿಳಿಸಿವೆ.

ಜಮ್ಮು ಮತ್ತು ಕಾಶ್ಮೀರ ಕಣಿವೆಯಲ್ಲಿ ಪತ್ತೆಯಾದ ನಂತರ ದೇಶದಲ್ಲಿ ಲಿಥಿಯಂ ಪತ್ತೆಯಾದ ಎರಡನೇ ರಾಜ್ಯ ಕರ್ನಾಟಕವಾಗಿದೆ. ರಾಯಚೂರಿನ ಅಮರೇಶ್ವರದಲ್ಲಿ ಈ ಲೋಹ ಕಂಡುಬಂದಿದೆ. ಇಲ್ಲಿಯೂ ಸಹ ಅರಣ್ಯ ಅನುಮತಿ ಸಿಕ್ಕಿಲ್ಲ. ಅನುಮತಿಸಿದರೆ, ಕರ್ನಾಟಕವು ಲಿಥಿಯಂ ಅನ್ನು ಹೊರತೆಗೆಯುವ ಮೊದಲ ರಾಜ್ಯವಾಗಲಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !