ಹೊಸದಿಗಂತ ವರದಿ, ಕುಶಾಲನಗರ:
ಇಲ್ಲಿಗೆ ಸಮೀಪದ ಹಾರಂಗಿ ಅಣೆಕಟ್ಟೆಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅದನ್ನು ಸುರಕ್ಷಿತವಾಗಿ ಅತ್ತೂರು ಅರಣ್ಯಕ್ಕೆ ಬಿಡಲಾಗಿದೆ.
ಶುಕ್ರವಾರ ರಾತ್ರಿ ಅಣೆಕಟ್ಟೆಯ ಮೇಲೆ ಬೃಹತ್ ಗಾತ್ರದ ಹೆಬ್ಬಾವು ಇರುವುದನ್ನು ಕರ್ನಾಟಕ ಕೈಗಾರಿಕಾ ರಕ್ಷಣಾ ಪಡೆ(ಕೆ.ಎಸ್.ಐ.ಎಸ್.ಎಫ್)ಯ ಸಿಬ್ಬಂದಿ ಗಮನಿಸಿದ್ದು, ಕೂಡಲೇ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.
ಅರಣ್ಯ ಇಲಾಖಾಧಿಕಾರಿ ಅನಿಲ್ ಡಿಸೋಜಾ ಅವರು, ಸ್ನೇಕ್ ಪ್ರವೀಣ್ ಹಾಗೂ ಸ್ನೇಕ್ ಉದಯ್ ಅವರ ಸಹಾಯದಿಂದ ಸುಮಾರು 15ಅಡಿ ಉದ್ದದ ಹೆಬ್ಬಾವನ್ನು ಸುರಕ್ಷಿತವಾಗಿ ಹಿಡಿದು ಅತ್ತೂರು ಮೀಸಲು ಅರಣ್ಯಕ್ಕೆ ಬಿಟ್ಟಿದ್ದಾರೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ