ಅರಮನೆ ಭೂ ವಿವಾದದಲ್ಲಿ ರಾಜ್ಯ ಸರ್ಕಾರಕ್ಕೆ ಭಾರಿ ಹಿನ್ನಡೆ: TDR​​ ನೀಡುವಂತೆ ‘ಸುಪ್ರೀಂ’ ಸೂಚನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರು ಅರಮನೆ ಮೈದಾನದ ಭೂ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಹಿನ್ನಡೆ ಆಗಿದೆ. ಅರಮನೆ ಮೈದಾನದ 15 ಎಕರೆಗೂ ಹೆಚ್ಚು ಭೂಮಿಗೆ ಮೂರು ಸಾವಿರ ಕೋಟಿಯ ವರ್ಗಾವಣೆ ಮಾಡಬಹುದಾದ ಅಭಿವೃದ್ಧಿ ಹಕ್ಕು ಅಂದರೆ ಟಿಡಿಆರ್ ನೀಡಲು ರಾಜಮನೆತನಕ್ಕೆ ಸುಪ್ರೀಂಕೋರ್ಟ್ ಆದೇಶಿಸಿದೆ.

ನ್ಯಾ ಅರವಿಂದ್ ಕುಮಾರ್​ ನೇತೃತ್ವದ ದ್ವಿ ಸದಸ್ಯ ಪೀಠದಿಂದ ಕೂಡಲೇ ರಾಜಮನೆತನಕ್ಕೆ ಟಿಡಿಆರ್ ನೀಡುವಂತೆ ಸರ್ಕಾರಕ್ಕೆ ಆದೇಶ ಹೊರಡಿಸಲಾಗಿದೆ.

ಈ ಟಿಡಿಆರ್​ಗಳನ್ನು ರಾಜಮನೆತನಕ್ಕೆ ನೀಡಬಾರದು ಎಂದು ರಾಜ್ಯ ಸರ್ಕಾರವು ಮಧ್ಯಂತರ ಅರ್ಜಿಯಲ್ಲಿ ಮನವಿ ಮಾಡಿತ್ತು. ಇದೀಗ ಅಂತಿಮವಾಗಿ ರಾಜಮನೆತನಕ್ಕೆ ಟಿಡಿಆರ್ ನೀಡುವಂತೆ ಸುಪ್ರೀಂಕೋರ್ಟ್​ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!