ದೀಪಾವಳಿ ಹಬ್ಬದ ದಿನದಂದೇ ಸಚಿವ ಡಾ.ಕೆ.ಸುಧಾಕರ್ ಅವರಿಂದ ಮಾನವೀಯತೆಯ ನಿರ್ಧಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ದೀಪಾವಳಿ ಹಬ್ಬದ ದಿನದಂದೇ ಮಾವೀಯತೆಯ ಮಹತ್ವದ ನಿರ್ಧಾರವನ್ನು ಕೈಗೊಂಡಿದ್ದಾರೆ.
ಕೋವಿಡ್ ಕಾರಣದಿಂದಾಗಿ ತಂದೆ-ತಾಯಿ ಇಬ್ಬರನ್ನು ಕಳೆದುಕೊಂಡು ಅನಾಥವಾಗಿದ್ದ 9 ಮಕ್ಕಳನ್ನು ಆರೋಗ್ಯ ಮತ್ತು ವೈದ್ಯಕೀಯ ಸಚಿವ ಡಾ.ಕೆ ಸುಧಾಕರ್ ದತ್ತು ತೆಗೆದುಕೊಂಡಿದ್ದಾರೆ.
ಈ ಕುರಿತಂತೆ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ಕೊರೋನಾದಿಂದ ತಂದೆ-ತಾಯಿ ಇಬ್ಬರನ್ನೂ ಕಳೆದುಕೊಂಡು ಅನಾಥರಾಗಿದ್ದ ಚಿಕ್ಕಬಳ್ಳಾಪುರ ಜಿಲ್ಲೆಯ 9 ಮಕ್ಕಳನ್ನು ದತ್ತು ತೆಗೆದುಕೊಂಡು ಅವರ ಸಂಪೂರ್ಣ ಜವಾಬ್ದಾರಿಯನ್ನು ವಹಿಸಿಕೊಂಡಿದ್ದೆ‌. ದೀಪಾವಳಿಯ ಈ ಶುಭದಿನದಂದು ಅವರನ್ನು ಭೇಟಿಯಾಗಿ ಅವರ ಜೊತೆ ಹಬ್ಬದ ಊಟ ಸವಿದು, ಅವರ ಯೋಗಕ್ಷೇಮ ವಿಚಾರಿಸಲಾಯಿತು‌ ಎಂದು ತಿಳಿಸಿದ್ದಾರೆ.
ಮತ್ತೊಬ್ಬರ ಬಾಳಿಗೆ ಬೆಳಕಾಗುವ ಈ ಪುಣ್ಯ ಕಾರ್ಯ ಮಾಡಲು ನನಗೆ ಪ್ರೇರೇಪಣೆ ನೀಡಿದ ಆ ಭಗವಂತನಿಗೆ ಕೋಟಿ ಪ್ರಣಾಮಗಳು. ಈಗಾಗಲೇ ಎಲ್ಲಾ 9 ಮಕ್ಕಳಿಗೂ ತಲಾ ₹1 ಲಕ್ಷ ಸಹಾಯಧನ ನೀಡಲಾಗಿದ್ದು, ಅವರ ಶಿಕ್ಷಣ ಹಾಗೂ ಇತರ ಜವಾಬ್ದಾರಿಗಳನ್ನು ನಮ್ಮ ಸಾಯಿಕೃಷ್ಣ ಚಾರಿಟಬಲ್ ಟ್ರಸ್ಟ್ ಮುಖಾಂತರ ವಹಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಮಕ್ಕಳೆಲ್ಲಾ ವಿದ್ಯಾವಂತರಾಗಿ, ಸತ್ಪ್ರಜೆಗಳಾಗಿ, ಯಶಸ್ವೀ ಜೀವನ ನಡೆಸುವಂತಾಗಲಿ ಎಂದು ಆ ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!