ನನ್ನನ್ನು ಬಂಧಿಸಲು ನೂರು ಸಿದ್ದರಾಮಯ್ಯ ಬರಬೇಕು: ಸಿದ್ದುಗೆ HDK ಟಾಂಗ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ನನ್ನನ್ನು ಬಂಧಿಸಲು 100 ಸಿದ್ದರಾಮಯ್ಯ ಬರಬೇಕು ಎಂದು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಸಿದ್ದುಗೆ ತಿರುಗೇಟು ನೀಡಿದ್ದಾರೆ. ಅಗತ್ಯ ಬಿದ್ದರೆ ಕುಮಾರಸ್ವಾಮಿ ಅವರನ್ನು ಬಂಧಿಸಲಾಗುವುದು ಎಂಬ ಸಿಎಂ ಹೇಳಿಕೆ ಕುರಿತು ನಗರದ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾವ ಸಿಎಂ ಕೂಡ ಇಂತಹ ಬೂಟಾಟಿಕೆ ಮಾಡಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ಸಿದ್ದರಾಮಯ್ಯ ಹೇಳಿಕೆ ಕುರಿತು ಮಾತನಾಡಿದ ಹೆಚ್.ಡಿ. ಕುಮಾರಸ್ವಾಮಿ, ನನಗೆ ಭಯ ಶುರುವಾಗಿದೆಯಾ, ನನ್ನ ನೋಡಿದ್ರೆ ಹಾಗೆ ಅನಿಸುತ್ತಾ? ಎಂದು ತಿರುಗೇಟು ನೀಡಿದ್ದಾರೆ. ಕಳೆದ ವಾರದಿಂದ ಮುಖ್ಯಮಂತ್ರಿ ಹೇಗೆ ನಡೆದುಕೊಂಡಿದ್ದಾರೆ ನೋಡಿದ್ದೀರಲ್ವಾ? ಇವರು ಏನು ಮಾಡಿದ್ದಾರೆ ಎಂದು ಜನರು ನೋಡಿದ್ದಾರೆ ಎಂದು ಕಿಡಿಕಾರಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!