ಒಲ್ಲದ ಗಂಡನಿಗೆ ನೂರಾರು ಕುಂಟುನೆಪ: ಕಾಂಗ್ರೆಸ್ ಸರಕಾರದ ವಿರುದ್ಧ ಬೊಮ್ಮಾಯಿ ವಾಗ್ದಾಳಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಜ್ಯ ಸರಕಾರದ ಸ್ಥಿತಿ ಹೇಗೆ ಆಗಿದೆ ಅಂದರೆ ಒಲ್ಲದ ಗಂಡನಿಗೆ ನೂರಾರು ಕುಂಟುನೆಪ ಎಂಬಂತೆ ಆಗಿದ್ದು, ಸರ್ಕಾರ ರಚನೆ ಮಾಡಿರುವ ಕಾಂಗ್ರೆಸ್ (Congress) ಈಗ ಚುನಾವಣಾಪೂರ್ವದಲ್ಲಿ ನೀಡಿದ್ದ ಗ್ಯಾರಂಟಿಗಳ ಜಾರಿಗೆ ನೆಪ ಹೇಳುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸರ್ಕಾರ ರಚನೆಯಾದರೂ ಗ್ಯಾರಂಟಿಗಳನ್ನು ಘೋಷಣೆ ಮಾಡಿಲ್ಲ. ಮುಂದಿನ ಸಂಪುಟ ಸಭೆಯಯಲ್ಲಿ ಭರವಸೆ ಈಡೇರಿಸುತ್ತೇವೆ ಎಂದಿದ್ದಾರೆ. ಕಾಂಗ್ರೆಸ್ ಸರ್ಕಾರ ಏನು ಮಾಡುತ್ತೋ ನೋಡೋಣ ಎಂದು ಹೇಳಿದ್ದಾರೆ.

ಮಹಿಳೆಯರಿಗೆ ಉಚಿತ ಬಸ್​ ಪಾಸ್ ನೀಡುತ್ತೇವೆ ಎಂದು ಹೇಳಿದ್ದಾರೆ. ಈಗ ಉಚಿತ ಪ್ರಯಾಣದ ಬಗ್ಗೆ ನೆಪಗಳು ಹೇಳುತ್ತಿದ್ದಾರೆ. ತಮಿಳುನಾಡಿನಿಂದ ಬರುವವರಿಗೆ ನಿಯಮ ಅನ್ವಯಿಸಲ್ಲ ಎಂದಿದ್ದಾರೆ. ಇವರು ತಮಿಳುನಾಡಿನವರು ಎಂದು ಹೇಗೆ ಗುರುತಿಸುತ್ತಾರೆ? ಒಲ್ಲದ ಗಂಡನಿಗೆ ನೂರಾರು ಕುಂಟುನೆಪ ಎಂಬಂತಿದೆ ಸರ್ಕಾರದ ನಡೆ ಎಂದು ಬೊಮ್ಮಾಯಿ ಟೀಕಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!