ಬಂಗಾಳಕೊಲ್ಲಿಯಲ್ಲಿ ಅಸಾನಿ ಚಂಡಮಾರುತ: ರಾಜ್ಯದಲ್ಲಿ ಭಾರೀ ಮಳೆಯ ಮುನ್ಸೂಚನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್

ಬಂಗಾಳಕೊಲ್ಲಿಯಲ್ಲಿನ ಅಸಾನಿ ಚಂಡಮಾರುತ ಪರಿಣಾಮ ರಾಜ್ಯದಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ತಜ್ಞರು ಮಾಹಿತಿ ನೀಡಿದ್ದಾರೆ.
ರಾಜ್ಯದಲ್ಲಿ ಮುಂದಿನ ಮೂರ್ನಾಲ್ಕು ದಿನ ಗುಡುಗು ಸಹಿತ ಮಳೆಯಾಗಲಿದೆ.ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಲ್ಲಿ ದೊಡ್ಡ ಪ್ರಮಾಣದಲ್ಲಿ ಮಳೆಯಾಗುವುದಿಲ್ಲ. ಆದರೂ, ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದೆ.
ಹವಾಮಾನ ತಜ್ಞ ಡಾ.ಶ್ರೀನಿವಾಸರೆಡ್ಡಿ ಮಾಹಿತಿ ಪ್ರಕಾರ, ಚಂಡಮಾರುತ ಪರಿಣಾಮ ಕರ್ನಾಟಕ, ತಮಿಳುನಾಡು ಮತ್ತು ಆಂಧ್ರಪ್ರದೇಶದಲ್ಲಿ ಮಳೆ ಅಗಲಿದ್ದು, ಅಂಡಮಾನ್ ನಿಕೋಬಾರ್‌ನ ಪೂರ್ವಭಾಗದಿಂದ ಆರಂಭವಾಗುವ ಚಂಡಮಾರುತ, ಬಾಂಗ್ಲಾದೇಶ ಮತ್ತು ಮ್ಯಾನ್ಮಾರ್‌ನ ಉತ್ತರ ಕರಾವಳಿಯತ್ತ ಚಲಿಸಲಿವೆ. ಮಾ.22ರಂದು ಈ ಎರಡು ದೇಶಗಳ ತೀರಕ್ಕೆ ಅಪ್ಪಳಿಸಲಿದೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!