ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೊಬೈಲ್ ಫೋನ್ ಲೌಡ್ ಸ್ಪೀಕರ್ ಹಾಕುವ ವಿಚಾರಕ್ಕೆ ದಂಪತಿ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಪತ್ನಿಯನ್ನು ಕತ್ತು ಹಿಸುಕಿ ಉಸಿರುಗಟ್ಟಿಸಿ ಕೊಲೆ ಮಾಡಿ ಪರಾರಿಯಾಗಿದ್ದ ಪತಿಯನ್ನು ಬಸವೇಶ್ವರ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಮಹಾಗಣಪತಿನಗರ ನಿವಾಸಿ ಲೋಕೇಶ್ ಕುಮಾರ್ ಗೆಹಲೋಟ್ (43) ಬಂಧಿತ. ಈತ ಏ.24ರಂದು ಸಂಜೆ ಸುಮಾರು 6 ಗಂಟೆಗೆ ಪತ್ನಿ ನಮಿತಾ ಸಾಹು (43) ಜತೆಗೆ ಜಗಳ ತೆಗೆದು ಕೊಲೆ ಮಾಡಿ ಪರಾರಿಯಾಗಿದ್ದ. ಈ ಸಂಬಂಧ ನೀಡಲಾದ ದೂರಿನ ಮೇರೆಗೆ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ.
ರಾಜಸ್ಥಾನ ಮೂಲದ ಲೋಕೇಶ್ ಕಬ್ಬನ್ಪೇಟೆಯಲ್ಲಿ ಫೋಟೋ ಸ್ಟುಡಿಯೋ ನಡೆಸುತ್ತಿದ್ದ. ಐದು ವರ್ಷಗಳ ನಮಿತಾ ಸಾಹುರನ್ನು ಮದುವೆ ಆಗಿದ್ದ. ದಂಪತಿಗೆ 3 ವರ್ಷದ ಹೆಣ್ಣು ಮಗುವಿದ್ದು, ಬಸವೇಶ್ವರನಗರದ ಮಹಾಗಣಪತಿ ನಗರದ ಬಾಡಿಗೆ ಮನೆಯಲ್ಲಿ ನೆಲೆಸಿದ್ದ.
ಆರೋಪಿ ಲೋಕೇಶ್ ಏ.24ರಂದು ಸಂಜೆ ಕೆಲಸ ಮುಗಿಸಿಕೊಂಡು ಮನೆಗೆ ಬಂದಿದ್ದ. ಈ ವೇಳೆ ಪತ್ನಿಯ ಅಣ್ಣ ಸತ್ಯಂ, ಲೋಕೇಶ್ ಮೊಬೈಲ್ಗೆ ಕರೆ ಮಾಡಿದ್ದರಿಂದ ಆತನೊಂದಿಗೆ ಮಾತನಾಡುತ್ತಿದ್ದ. ಆಗ ಪತ್ನಿ ನಮಿತಾ ಯಾರು ಕರೆ ಮಾಡಿರುವುದು ಎಂದು ಕೇಳಿದ್ದಾರೆ.