ಹೊಸದಿಗಂತ ವರದಿ, ನಂಜನಗೂಡು:
ಕುಡಿದ ಅಮಲಿನಲ್ಲಿದ್ದ ಗಂಡ ತನ್ನ ಪತ್ನಿಯನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ತಾಲೂಕಿನ ಕೊತ್ತನಹಳ್ಳಿ ಆದಿವಾಸಿ ಕಾಲೊನಿಯಲ್ಲಿ ಶನಿವಾರ ನಡೆದಿದೆ.
ಕೊತ್ತನಹಳ್ಳಿ ಆದಿವಾಸಿ ಕಾಲೊನಿಯ ರವಿ ಎಂಬುವವರ ಪತ್ನಿ ಮಾಚಿ (22) ಮೃತ ದುರ್ದೈವಿ.
ಕುಡಿದ ಅಮಲಿನಲ್ಲಿದ್ದ ಗಂಡ ಹೆಂಡತಿಯೊಡನೆ ಕ್ಷುಲ್ಲಕ ಕಾರಣಕ್ಕೆ ಜಗಳ ತೆಗೆದಿದ್ದಾನೆ. ಜಗಳದ ನಡುವಿನ ಮಾತಿನ ಚಕಮಕಿ ವಿಕೋಪಕ್ಕೆ ತಿರುಗಿ, ಪತಿ ರವಿ ಪತ್ನಿಯ ಮೇಲೆ ಮಚ್ಚಿನಿಂದ.ಕುತ್ತಿಗೆ ಮತ್ತು ತಲೆಗೆ ಬಲವಾಗಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಪತ್ನಿ ಮಾಚಿ ಮೃತ ಪಟ್ಟಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ವಿಷಯ ತಿಳಿದು ಸ್ಥಳಕ್ಕೆ ಬೇಟಿ ನೀಡಿದ ಎಂದು ಹುಲ್ಲಹಳ್ಳಿ ಪೊಲೀಸ್ ಠಾಣೆಯ ಪಿ.ಎಸ್.ಐ ರಮೇಶ್ ಕರಕಿಕಟ್ಟಿ ಆರೋಪಿಯನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಸ್ಥಳಕ್ಕೆ ಡಿವೈಎಸ್ ಪಿ ಗೋವಿಂದರಾಜು, ಸಿ.ಪಿ.ಐ ಚಂದ್ರಶೇಖರ್ ಭೇಟಿ ನೀಡಿ ಮಹಜರು ನಡೆಸಿದರು.
ಈ ಸಂಬಂಧ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.