ಕಪ್ಪಗೆ ಇದ್ದೀಯ ಎಂದು ಹೀಯಾಳಿಸಿದ ʼಗಂಡನ ಫ್ಯಾಮಿಲಿʼ: ಮನನೊಂದು ನವವಿವಾಹಿತೆ ಆತ್ಮಹತ್ಯೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ನವ ವಿವಾಹಿತೆ ಕಪ್ಪಾಗಿದ್ದಾಳೆ ಎಂದು ಅತ್ತೆ ಹಾಗೂ ಭಾವ ಪದೇ ಪದೇ ಕಿರುಕುಳ ನೀಡುತ್ತಿದ್ದರಂತೆ. ವರ್ಣಭೇದಕ್ಕೆ ಬೇಸತ್ತ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನನ್ನ ಸಾವಿಗೆ ಅತ್ತೆ ಹಾಗೂ ಭಾವನೇ ಕಾರಣ ಅಂತ ಡೆತ್ ನೋಟ್ ಬರೆದಿಟ್ಟಿದ್ದು, ಇದೀಗ ಕಿರುಕುಳ ನೀಡದ ಅತ್ತೆ ಹಾಗೂ ಭಾವ ಜೈಲು ಸೇರಿದ್ದಾರೆ.

ಗದಗನ ಬೆಟಗೇರಿಯ ಶರಣಬಸವೇಶ್ವರ ನಗರದ ನಿವಾಸಿಯಾದ ಅಮರೇಶ್ ಹಾಗೂ ಬಳ್ಳಾರಿ ಮೂಲದ ಪೂಜಾ ಜೊತೆಗೆ ನಾಲ್ಕು ತಿಂಗಳ ಹಿಂದೆ ಅದ್ದೂರಿಯಾಗಿ ಮದುವೆಯಾಗಿತ್ತು. ಆದರೆ ಮದುವೆಯಾದ ಹೊಸದರಲ್ಲಿ ಅತ್ತೆ ಶಶಿಕಲಾ ಹಾಗೂ ಭಾವ ವೀರನಗೌಡ ನೀನು ಕಪ್ಪಾಗಿದ್ದಿಯಾ, ನಮ್ಮ ಅಮರೇಶನಿಗೆ ಇನ್ನೂ ಚೆನ್ನಾಗಿರುವ ಹುಡುಗಿ ಸಿಗುತ್ತಿದ್ದಳು ಎಂದು ಕಿರುಕುಳ ನೀಡಿದ್ದಾರೆ ಎನ್ನಲಾಗಿದೆ.

ಹೀಗಾಗಿ ಪದೇ ಪದೇ ಈ ರೀತಿಯ ವರ್ಣಭೇದ ಹಿಂಸೆ ತಾಳದೇ ಮನನೊಂದ ಪೂಜಾ ಏಪ್ರಿಲ್ 15 ರಂದು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸದ್ಯ ಅತ್ತೆ ಶಶಿಕಲಾ ಹಾಗೂ ಭಾವ ವೀರನಗೌಡರನ್ನು ಬಂಧಿಸಲಾಗಿದೆ.

 

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!