ಹೊಸದಿಗಂತ ಡಿಜಿಟಲ್ ಡೆಸ್ಕ್
ಹೈದರಾಬಾದ್ನ ಭೋಯಿಗುಡಾದ ಗುಜರಿ ವಸ್ತುಗಳ ದಾಸ್ತಾನು ಅಂಗಡಿಯಲ್ಲಿ ಭೀಕರ ಅಗ್ನಿ ಬುಧವಾರ ಅವಘಡ ಸಂಭವಿಸಿದ್ದು 11 ಕಾರ್ಮಿಕರು ಸಜೀವ ದಹನವಾಗಿದ್ದಾರೆ.
ಮೃತ ಕಾರ್ಮಿಕರು ಉತ್ತರ ಪ್ರದೇಶ ಮತ್ತು ಬಿಹಾರ ಮೂಲದವರು ಎಂದು ಪೊಲೀಸರು ತಿಳಿಸಿದ್ದಾರೆ. ಒಟ್ಟು ಹನ್ನೆರಡು ಮಂದಿ ಗೋದಾಮಿನೊಳಗಿದ್ದರು. ಒರ್ವ ವ್ಯಕ್ತಿ ಮಾತ್ರವೇ ಅವಘಡದಲ್ಲಿ ಪಾರಾಗಿದ್ದಾರೆ. ಎಲ್ಲಾ 11 ಶವಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ ಎಂದು ಹೈದರಾಬಾದ್ ಕೇಂದ್ರ ವಲಯ ಡಿಸಿಪಿ ಮಾಹಿತಿ ನೀಡಿದ್ದಾರೆ.
#Watch: A massive broke out at #Bhoiguda #Secunderabad #Telangana
More details awaited. #FireIncident #FireFigther #FIre #News #India pic.twitter.com/FGkT7IazTa
— Free Press Journal (@fpjindia) March 23, 2022
ಬೆಳ್ಳಂಬೆಳಗ್ಗೆ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಟ್ಟಿಗೆ ಮತ್ತು ಬಿರಿನಿಂದ ಮಾಡಿದ್ದ ಕಟ್ಟಡವನ್ನು ಬೆಂಕಿ ಸಂಪೂರ್ಣವಾಗಿ ಆವರಿಸಿಕೊಂಡಿದೆ. ಕೂಡಲೇ ಸ್ಥಳೀಯರು ಮಾಹಿತಿ ರವಾನಿಸಿದ ತಕ್ಷಣವೇ ಅಗ್ನಿ ಶಾಮಕ ದಳ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯಾರಂಭಿಸಿತು. ಆದರೆ ಅಷ್ಟೊತ್ತಿಗಾಗಲೇ 11 ಜನರು ಸಜೀವ ದಹನಗೊಂಡಿದ್ದರು ಎಂದು ಅಗ್ನಿಶಾಮಕ ಸಿಬ್ಬಂದಿ ತಿಳಿಸಿದ್ದಾರೆ. ಅಗ್ನಿ ಅವಘಡಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲವಾದರೂ, ವಿಸದ್ಯುತ್ ಶಾರ್ಟ್ ಸರ್ಕ್ಯೂಟ್ ಬೆಂಕಿಗೆ ಕಾರಣವಾಗಿರಬಹುದು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.