ಪಂಜಾಬ್‌ನಲ್ಲಿ ಹೈಡ್ರಾಮಾ: ವಿಶ್ವಾಸಮತ ಯಾಚನೆಗೆ ತುರ್ತು ಅಧಿವೇಶನ ಕರೆದ​ ಸಿಎಂ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಂಜಾಬ್​ ಆಪ್​ ಸರ್ಕಾರವನ್ನು ಕೆಡವಲು ಬಿಜೆಪಿ ಯತ್ನಿಸುತ್ತಿದೆ ಎಂಬ ಆರೋಪದ ಮಧ್ಯೆಯೇ ಮುಖ್ಯಮಂತ್ರಿ ಭಗವಂತ್​ ಮಾನ್​ ಸರ್ಕಾರ ಸೆಪ್ಟೆಂಬರ್​ 22 ರಂದು ವಿಧಾನಮಂಡಲ ವಿಶೇಷ ಅಧಿವೇಶನ ಕರೆದಿದ್ದು, ವಿಶ್ವಾಸಮತ ಯಾಚನೆ ಮಾಡಲಿದ್ದಾರೆ.
ವಿಧಾನಮಂಡಲದ ವಿಶೇಷ ಅಧಿವೇಶನವು ಸೆಪ್ಟೆಂಬರ್ 22 ರಂದು ನಡೆಯಲಿದೆ. ಈ ವೇಳೆ ಆಪ್​ ಸರ್ಕಾರ ವಿಶ್ವಾಸಮತ ಯಾಚನೆ ಮಾಡಲಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಟ್ವೀಟ್​ ಮಾಡಿದ್ದಾರೆ.
ಪಂಜಾಬ್​ ಆಪ್​ ಸರ್ಕಾರವನ್ನು ಕೆಡವಲು ಬಿಜೆಪಿ ತಂತ್ರ ರೂಪಿಸುತ್ತಿದ್ದು, ಅದರ ಭಾಗವಾಗಿ ನಮ್ಮ ಶಾಸಕರೊಂದಿಗೆ ಸಂಪರ್ಕ ಸಾಧಿಸಲು ಪ್ರಯತ್ನಿಸುತ್ತಿದೆ. ಪಂಜಾಬ್​ ಜನರು ಮೆಚ್ಚಿ ರಚಿಸಿರುವ ನೆಚ್ಚಿನ ಸರ್ಕಾರವನ್ನು ಬೀಳಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಸಿಎಂ ಭಗವಂತ್ ಮಾನ್ ಆರೋಪಿಸಿದ್ದಾರೆ.

ಜನರ ಈ ನಂಬಿಕೆಯನ್ನು ನಾವು ಮತ್ತು ನಮ್ಮ ಶಾಸಕರು ಉಳಿಸಿಕೊಳ್ಳುತ್ತೇವೆ. ಹೀಗಾಗಿ ಸೆ.22ರಂದು ವಿಧಾನಮಂಡಲದ ವಿಶೇಷ ಅಧಿವೇಶನ ಕರೆಯಲಾಗಿದೆ. ಈ ವೇಳೆ, ವಿಶ್ವಾಸಮತ ಯಾಚನೆ ಮಾಡಲಾಗುತ್ತದೆ. ಇದರಲ್ಲಿ ಗೆದ್ದು ನಮ್ಮ ಶಕ್ತಿ ತೋರಿಸಲಾಗುವುದು ಎಂದು ಹೇಳಿದರು.

ದೆಹಲಿಯಲ್ಲೂ ಕೇಳಿ ಬಂದಿದ್ದ ಆರೋಪ: ಈ ಮೊದಲು ದೆಹಲಿ ಸಿಎಂ ಅರವಿಂದ್​ ಕೇಜ್ರಿವಾಲ್​ ಅವರು ಕೂಡ ತಮ್ಮ ಸರ್ಕಾರವನ್ನು ಭಗ್ನ ಮಾಡಲು ಬಿಜೆಪಿ ದೆಹಲಿ ಆಪ್​ ಶಾಸಕರನ್ನು ಸಂಪರ್ಕಿಸಿ ಹಣದ ಆಮಿಷ ಒಡ್ಡಿದೆ ಎಂದು ಆರೋಪಿಸಿ, ತುರ್ತು ಅಧಿವೇಶನ ಕರೆದು ವಿಶ್ವಾಸಮತ ಯಾಚನೆ ಮಾಡಿ ಗೆದ್ದಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!