ಹೊಸದಿಗಂತ ಡಿಜಿಟಲ್ ಡೆಸ್ಕ್:
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಆಗ್ರಹಿಸಿ ದೆಹಲಿಯಲ್ಲಿ ಬೃಹತ್ ಪ್ರತಿಭಟನೆ ನಡೆಯುತ್ತಿದೆ. ಈ ಪ್ರತಿಭಟನೆಗೆ ಬಾಲಿವುಡ್ ನಟ ಸಲ್ಮಾನ್ ಖಾನ್ ಬೆಂಬಲ ನೀಡಿದ್ದಾರೆ.
ಪ್ರತಿಭಟನೆ ಶಾಂತಿಯುತವಾಗಿ ನಡೆಯುತ್ತಿತ್ತು. ಅದು ಹಿಂಸೆಗೆ ತಿರುಗಿದ್ದು ಖೇದಕರ. ಗಾಯಗೊಂಡ ವಿದ್ಯಾರ್ಥಿಗಳು ಹಾಗೂ ಅವರ ಕುಟುಂಬಗಳ ಬಗ್ಗೆ ನನಗೆ ಅತೀವ ನೋವಾಗುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆ ಗಂಭೀರ ವಿಷಯ. ಈ ಪ್ರತಿಭಟನೆಯನ್ನು ಯಾವುದೇ ರೀತಿಯ ರಾಜಕೀಯ ಉದ್ದೇಶಗಳಿಗೆ ಬಳಸಿಕೊಳ್ಳಬೇಡಿ ಎಂದು ಮನವಿ ಮಾಡಿದ್ದಾರೆ.
ವಿದ್ಯಾರ್ಥಿಗಳ ನಿಲುವನ್ನು ನಾನು ಮೆಚ್ಚುತ್ತೇನೆ. ಕಠಿಣವಾಗಿ ಓದಿ ತಮ್ಮ ಭವಿಷ್ಯವನ್ನು ಮಾತ್ರವಲ್ಲ, ಇನ್ನಷ್ಟು ಶಕ್ತಿಶಾಲಿ ಮತ್ತು ವಿದ್ಯಾವಂತ ಭಾರತದ ನಿರ್ಮಾಣಕ್ಕೂ ಕೊಡುಗೆ ನೀಡಬೇಕೆಂಬ ಅವರ ಸಮರ್ಪಣೆ, ಪ್ರಾಮಾಣಿಕತೆ ಮತ್ತು ದೃಢಸಂಕಲ್ಪ ನಿಜಕ್ಕೂ ಸ್ಫೂರ್ತಿದಾಯಕವಾಗಿದೆ. ಈ ಪ್ರತಿಭಟನೆ ಶಿಕ್ಷಣದ ಮಹತ್ವದ ಮೇಲಿನ ಅವರ ಧೈರ್ಯ, ಸಹನೆ ಮತ್ತು ಬದ್ಧತೆಯನ್ನು ತೋರಿಸಿದೆ.
ಈ ವಿಷಯ ವಿದ್ಯಾರ್ಥಿಗಳು ಮತ್ತು ಶಿಕ್ಷಣ ವ್ಯವಸ್ಥೆಯ ನಡುವಿನದ್ದು. ಇದನ್ನು ರಾಜಕೀಯ ಉದ್ದೇಶಕ್ಕೆ ಬಳಸಿಕೊಳ್ಳಬಾರದು. ಸರಿಯಾದದ್ದಕ್ಕಾಗಿ ಧ್ವನಿ ಎತ್ತಿದ ವಿದ್ಯಾರ್ಥಿಗಳಿಗೆ ಇದರ ಸಂಪೂರ್ಣ ಶ್ರೇಯಸ್ಸು ಸಲ್ಲಬೇಕು. ಸರ್ಕಾರವೂ ಅವರ ಸಮಸ್ಯೆಯನ್ನು ಆಲಿಸಿ, ಅವರಿಗೆ ಅಗತ್ಯವಾದ ಬೆಂಬಲ ನೀಡಿ, ಶಿಕ್ಷಣ ವ್ಯವಸ್ಥೆಯನ್ನು ಇನ್ನಷ್ಟು ಬಲಿಷ್ಠ ಮತ್ತು ಪಾರದರ್ಶಕವಾಗಿಸಲು ಕ್ರಮ ಕೈಗೊಳ್ಳುತ್ತದೆ ಎಂಬ ವಿಶ್ವಾಸ ನನಗಿದೆ. ಸಕಾರಾತ್ಮಕ ನಿರ್ಧಾರಕ್ಕಾಗಿ ನಾನು ಪ್ರಾರ್ಥಿಸುತ್ತಿದ್ದೇನೆ. ಉತ್ತಮ ಶಿಕ್ಷಣಕ್ಕಾಗಿ ಶ್ರಮಿಸುತ್ತಿರುವ ಪ್ರತಿಯೊಬ್ಬ ವಿದ್ಯಾರ್ಥಿಗೂ ದೇವರು ಆಶೀರ್ವದಿಸಲಿ ಎಂದಿದ್ದಾರೆ.



