ನಾನು ಕೂಡ ಮೋಡ ಬಿತ್ತನೆಯ ಪರ: ಡಿ.ಕೆ.ಶಿವಕುಮಾರ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಮೋಡ ಬಿತ್ತನೆ ಮಾಡುವ ಬಗ್ಗೆ ಸಕಾರಾತ್ಮಕ ನಿಲುವು ಹೊಂದಿರುವುದಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.

ವಿಧಾನಸಭೆಯ ಮಾತನಾಡಿದ ಅವರುಶಾಸಕ ಪ್ರಕಾಶ್ ಕೋಳಿವಾಡ ಅವರು ಮೋಡ ಬಿತ್ತನೆ ಮಾಡುವ ನಿಟ್ಟಿನಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದಾರೆ. ಮೋಡ ಬಿತ್ತನೆ ಮಾಡುವ ಕಂಪನಿಗಳ ಜೊತೆ ಈಗಾಗಲೇ ಮಾತುಕತೆ ನಡೆಸಿದ್ದಾರೆ. ಸ್ವಂತ ಖರ್ಚಿನಲ್ಲಿ ಮೋಡ ಬಿತ್ತನೆ ಮಾಡಲು ಕೂಡ ಅವರು ಆಸಕ್ತಿ ತೋರಿಸಿದ್ದಾರೆ. ಜನರಿಗೆ ಒಳ್ಳೆಯದನ್ನು ಮಾಡಬೇಕೆನ್ನುವ ಅವರ ಆಸಕ್ತಿ ಶ್ಲಾಘನೀಯ. ನಾನು ಕೂಡ ಮೋಡ ಬಿತ್ತನೆಯ ಪರವಾಗಿದ್ದೇನೆ. ಆದರೆ, ಕೆಲವು ತಾಂತ್ರಿಕ ತೊಂದರೆಗಳಿವೆ ಎಂದರು.

ತಾವು ಹಣಕಾಸು ಇಲಾಖೆಯ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿ ಯಾವ ರೀತಿ ನೆರವು ನೀಡಬಹುದೆಂಬುದನ್ನು ಪರಿಶೀಲಿಸುತ್ತೇನೆ. ಮೋಡ ಬಿತ್ತನೆಯನ್ನು ಈಗಾಗಲೇ ಹಲವು ರಾಜ್ಯಗಳು ಜಾರಿಗೊಳಿಸಿವೆ. ರಾಜ್ಯದಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ಇರುವ ಮೋಡಗಳ ಸದ್ಬಳಕೆಗಾಗಿ ಪ್ರಯತ್ನಿಸುವುದಾಗಿಭರವಸೆ ನೀಡಿದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!