ಹೊಸದಿಗಂತ ಡಿಜಿಟಲ್ ಡೆಸ್ಕ್:
ಗುಜರಾತ್ ಪಾಟೀದಾರ್ ಸಮುದಾಯದ ನಾಯಕ ಹಾರ್ದಿಕ್ ಪಟೇಲ್ ಇಂದು ಬಿಜೆಪಿ ಸೇರಲಿದ್ದಾರೆ. ಇತ್ತೀಚೆಗಷ್ಟೇ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದ ಅವರು ಇಂದು ಬಿಜೆಪಿಗೆ ಸೇರ್ಪಡೆಯಾಗುವ ಮುನ್ನ ಟ್ವೀಟ್ ಮಾಡಿ ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತವನ್ನು ಶ್ಲಾಘಿಸಿದ್ದಾರೆ. ಬಿಜೆಪಿ ಜೊತೆ ಸೇರಿ ಜನರಿಗಾಗಿ ಕೆಲಸ ಮಾಡುವುದಾಗಿ ತಿಳಿಸಿದ್ದಾರೆ.
”ದೇಶ, ರಾಜ್ಯ, ಜನತೆ ಹಾಗೂ ಸಮಾಜದ ಹಿತಕ್ಕಾಗಿ ಇಂದು ಹೊಸ ಅಧ್ಯಾಯ ಆರಂಭಿಸುತ್ತಿದ್ದೇನೆ. ದೇಶಕ್ಕೆ ಸೇವೆ ಸಲ್ಲಿಸಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದಲ್ಲಿ ರಾಷ್ಟ್ರಕ್ಕೆ ಸೇವೆ ಸಲ್ಲಿಸುವ ಉದಾತ್ತ ಕೆಲಸದಲ್ಲಿ ನಾನು ಸಣ್ಣ ಸೈನಿಕನಾಗಿ ಕೆಲಸ ಮಾಡುತ್ತೇನೆ” ಎಂದು ಹಾರ್ದಿಕ್ ಪಟೇಲ್ ಟ್ವೀಟ್ ಮಾಡಿದ್ದಾರೆ.
राष्ट्रहित, प्रदेशहित, जनहित एवं समाज हित की भावनाओं के साथ आज से नए अध्याय का प्रारंभ करने जा रहा हूँ। भारत के यशस्वी प्रधानमंत्री श्री नरेन्द्र भाई मोदी जी के नेतृत्व में चल रहे राष्ट्र सेवा के भगीरथ कार्य में छोटा सा सिपाही बनकर काम करूँगा।
— Hardik Patel (@HardikPatel_) June 2, 2022
ಕಾಂಗ್ರೆಸ್ ಪಕ್ಷದಲ್ಲಿ ಕೆಲ ತೀರ್ಮಾನಗಳನ್ನು ತೆಗೆದುಕೊಳ್ಳುವ ವೇಳೆ ತನ್ನನ್ನು, ತನ್ನ ಅಭಿಪ್ರಾಯವನ್ನು ಕಡೆಗಣಿಸುತ್ತಿದ್ದಾರೆ ಎಂಬ ಕಾರಣದಿಂದ ಕಾಂಗ್ರೆಸ್ಗೆ ರಾಜೀನಾಮೆ ನೀಡಿದ್ದಾರೆ. ಇಂದು ಬಿಜೆಪಿ ಸೇರ್ಪಡೆಯಾಗಲಿದ್ದಾರೆ.