ವಿಶ್ವೇಶ್ವರಯ್ಯರಂಥ ಮಹಾನ್ ವ್ಯಕ್ತಿಯ ನಾಡಿಗೆ ಕಾಲಿಟ್ಟಿದ್ದೇ ನನ್ನ ಸೌಭಾಗ್ಯ: ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪ್ರಧಾನಿ ಮೋದಿ ಇಂದು ಕರ್ನಾಟಕಕ್ಕೆ ಆಗಮಿಸಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.

ಸರ್ ಎಂ. ವಿಶ್ವೇಶ್ವರಯ್ಯರಂಥ ಮಹಾನ್ ವ್ಯಕ್ತಿಯನ್ನು ದೇಶಕ್ಕೆ ನೀಡಿದ ಮುದ್ದೇನಹಳ್ಳಿಯ ಪುಣ್ಯಭೂಮಿಗೆ ಭೇಟಿ ನೀಡಿದ್ದು ನನ್ನ ಸೌಭಾಗ್ಯ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಸತ್ಯಸಾಯಿ ಮಧುಸೂಧನ್ ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ಕೇಂದ್ರವನ್ನು ಉದ್ಘಾಟಿಸಿ ಕನ್ನಡದಲ್ಲಿಯೇ ಪ್ರಧಾನಿ ಮೋದಿ ಮಾತನಾಡಿದ್ದಾರೆ.

ಮುದ್ದೇನಹಳ್ಳಿ ದೇಶಕ್ಕೆ ಒಬ್ಬ ಮಹಾನ್ ಆರ್ಕಿಟೆಕ್ಟ್‌ನ್ನು ನೀಡಿದೆ. ಇಲ್ಲಿಗೆ ಭೇಟಿ ನೀಡಿ ಅವರ ಸಮಾಧಿ, ವಸ್ತುಸಂಗ್ರಹಾಲಯಕ್ಕೆ ಭೇಟಿ ನೀಡುವ ಅವಕಾಶ ಒದಗಿ ಬಂದಿದ್ದು ನನ್ನ ಸೌಭಾಗ್ಯ ಎಂದಿದ್ದಾರೆ. ಈ ಭೂಮಿಗೆ ನಾನು ತಲೆಬಾಗಿ ನಮಸ್ಕರಿಸುವೆ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!