ನಾನು ಭಯೋತ್ಪಾದಕನಲ್ಲ: ಜೈಲಿನಿಂದ ಅರವಿಂದ್ ಕೇಜ್ರಿವಾಲ್ ಸಂದೇಶ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನನ್ನ ಹೆಸರು ಅರವಿಂದ್ ಕೇಜ್ರಿವಾಲ್ ,ನಾನು ಭಯೋತ್ಪಾದಕನಲ್ಲ ತಿಹಾರ್ ಜೈಲಿನಿಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಂದೇಶ ಕಳುಹಿಸಿದ್ದಾರೆ.

ಈ ಕುರಿತು ಆಮ್ ಆದ್ಮಿ ಪಕ್ಷದ (ಎಎಪಿ) ಸಂಸದ ಸಂಜಯ್ ಸಿಂಗ್ ಮಾಹಿತಿ ನೀಡಿದ್ದು, ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾರ್ಚ್ 21 ರಂದು ಜಾರಿ ನಿರ್ದೇಶನಾಲಯದಿಂದ ಬಂಧಿಸಲ್ಪಟ್ಟು ಪ್ರಸ್ತುತ ತಿಹಾರ್ ಜೈಲಿನಲ್ಲಿರುವ ಅರವಿಂದ್ ಕೇಜ್ರಿವಾಲ್ ಅವರ ನೈತಿಕ ಸ್ಥೈರ್ಯವನ್ನು ಕುಗ್ಗಿಸಲು 24 ಗಂಟೆಗಳ ಪ್ರಯತ್ನಗಳು ನಡೆಯುತ್ತಿವೆ ಎಂದು ಆರೋಪಿಸಿದರು.

ದೇಶ ಮತ್ತು ದೆಹಲಿಯ ಜನರಿಗೆ ಮಗ ಮತ್ತು ಸಹೋದರನಂತೆ ಕೆಲಸ ಮಾಡಿದ ಅರವಿಂದ್ ಕೇಜ್ರಿವಾಲ್, ‘ನನ್ನ ಹೆಸರು ಅರವಿಂದ್ ಕೇಜ್ರಿವಾಲ್ ಮತ್ತು ನಾನು ಭಯೋತ್ಪಾದಕನಲ್ಲ’ ಎಂದು ಜೈಲಿನಿಂದ ಸಂದೇಶ ಕಳುಹಿಸಿದ್ದಾರೆ” ಎಂದು ಸಿಂಗ್ ಹೇಳಿದರು.

ಇದೇ ಮದ್ಯ ನೀತಿ ಪ್ರಕರಣದಲ್ಲಿ ಆರು ತಿಂಗಳ ಜೈಲುವಾಸದ ನಂತರ ಸಿಂಗ್ ಏಪ್ರಿಲ್ 4 ರಂದು ತಿಹಾರ್ ಜೈನ್ ನಿಂದ ಹೊರಬಂದಿದ್ದರು.

ಸೋಮವಾರ ತಿಹಾರ್ ಜೈಲಿನಲ್ಲಿ ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿಯಾದ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಕೂಡ ತಮ್ಮನ್ನು ಭಯೋತ್ಪಾದಕರಂತೆ ನಡೆಸಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!