ಬಿಜೆಪಿ ಕಟ್ಟಿರುವರಲ್ಲಿ ನಾನು ಒಬ್ಬ, ನನ್ನನ್ನು ಯಾರೂ ನಿರ್ಲಕ್ಷ್ಯ ಮಾಡಿಲ್ಲ: ಬಿಎಸ್‌ವೈ

ಹೊಸದಿಗಂತ ವರದಿ, ಕೊಪ್ಪಳ:
ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ, ಅಮಿತ್ ಶಾ ನೇತೃತ್ವದಲ್ಲಿ 150ಕ್ಕೂ ಅಧಿಕ ಸೀಟು ಗೆದ್ದು, ಸರ್ಕಾರ ರಚಿಸುವುದು ನಿಶ್ಚಿತ. ಸೂರ್ಯ – ಚಂದ್ರ ಇರುವುದು ಎಷ್ಟು ಸತ್ಯವೂ ನಾವು ಅಧಿಕಾರಕ್ಕೆ ಬರುವುದು ಅಷ್ಟೇ ಸತ್ಯ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಕೊಪ್ಪಳ ನಗರದ ಖಾಸಗಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಆಗಮಿಸಲಿದ್ದು, ಕಾರ್ಯಕ್ರಮಕ್ಕೆ ಭಾಗವಹಿಸಲು ಬಂದಿದ್ದೇನೆ.
ಬಿಜೆಪಿ ಸಂಘಟಿತ ವಾಗಿದೆ. ಒಗ್ಗೂಟ್ಟಾಗಿದೆ. ಈ ಭಾಗದಲ್ಲಿ ಪಕ್ಷ ಸಂಘಟನೆ ನಡೆಯುತ್ತಿದೆ ಎಂದರು.
ಯಾರೋ ನಾನೇ ಸಿಎಂ ಎಂದು ಹೇಳಿಕೊಳ್ಳುತ್ತಿದ್ದಾರೆ. ಭಾರತೀಯ ಜನತಾಪಕ್ಷ ಕಟ್ಟಿದ್ದರಲ್ಲಿ ನಾನು ಒಬ್ಬ
ನನ್ನನ್ನು ಯಾರೂ ದೂರವಿಟ್ಟಿಲ್ಲ. ನನ್ನನ್ನು ನಿರ್ಲಕ್ಷ್ಯ ಮಾಡಿದ್ದಾರೆ ಎಂಬುದು ಸುಳ್ಳು ಎಂದರು.
ನಾನು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಈಗ ನನಗಿರುವುದು ಒಂದು ಆಸೆ ಮತ್ತೆ ಬಿಜೆಪಿ ಅಧಿಕಾರಕ್ಕೆ ತರುವುದಾಗಿದೆ. ವಿಜಯೇಂದ್ರ ಎಲ್ಲಿ ಸ್ಪರ್ಧಿಸಬೇಕೆನ್ನುವುದನ್ನು ಪಕ್ಷ ನಿರ್ಧರಿಸುತ್ತದೆ ಎಂದಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!