ಭಾರತ -ಚೀನಾ ಗಡಿ ಬಿಕ್ಕಟ್ಟಿನ ಕುರಿತು ಚರ್ಚಿಸಲು ನಾನು ಸಿದ್ಧ: ರಾಜನಾಥ್ ಸಿಂಗ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತ ಮತ್ತು ಚೀನಾ ನಡುವಿನ ಗಡಿ ಬಿಕ್ಕಟ್ಟಿನ ಕುರಿತುಚರ್ಚಿಸಲು ಸಿದ್ಧವಿರುವುದಾಗಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಗುರುವಾರ ಹೇಳಿದ್ದಾರೆ.

ಲೋಕಸಭೆಯಲ್ಲಿ ಚಂದ್ರಯಾನ-3 ಯಶಸ್ಸು ಮತ್ತು ಬಾಹ್ಯಾಕಾಶ ಕ್ಷೇತ್ರದಲ್ಲಿನ ಇತರ ಸಾಧನೆಗಳ ಕುರಿತು ಚರ್ಚೆ ಆರಂಭಿಸಿದರು. ಈ ವೇಳೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರು ಚೀನಾದೊಂದಿಗಿನ ಗಡಿ ಬಿಕ್ಕಟ್ಟನ್ನು ಉಲ್ಲೇಖಿಸಿ, ಚರ್ಚೆ ನಡೆಸಲು ಧೈರ್ಯವಿದೆಯೇ? ಎಂದು ಸವಾಲು ಹಾಕಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಿಂಗ್‌, ‘ಪೂರಿ ಹಿಮ್ಮತ್ ಹೇ (ನನಗೆ ಸಂಪೂರ್ಣ ಧೈರ್ಯವಿದೆ). ನಾನು ಚರ್ಚೆಗೆ ಸಿದ್ಧ. ಚರ್ಚಿಸುವ ವಿಶ್ವಾಸವೂ ಇದೆ’ ಎಂದು ಹೇಳಿದರು.

2020ರ ಜೂನ್‌ನಲ್ಲಿ ಗಾಲ್ವಾನ್ ಕಣಿವೆಯಲ್ಲಿ ಉಭಯ ದೇಶಗಳ ಸೈನಿಕರ ನಡುವೆ ನಡೆದ ಮಾರಕ ಘರ್ಷಣೆಯ ನಂತರ ಭಾರತ ಮತ್ತು ಚೀನಾ ನಡುವಿನ ಸಂಬಂಧಗಳು ಹದಗೆಟ್ಟಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!