ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಚಿವ ಚೆಲುವರಾಯ ಸ್ವಾಮಿ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ತೀವ್ರ ವಾಗ್ದಾಳಿ ನಡೆಸಿದ್ದು, ಆತ ನನ್ನನ್ನು ಸಿಎಂ ಮಾಡಿದ ಎನ್ನುವುದು ಬಹುದೊಡ್ಡ ಜೋಕ್. ಶಾಸಕರು ನನ್ನನ್ನು ಮುಖ್ಯಮಂತ್ರಿ ಮಾಡಿದ್ದು ಎಂಬುದನ್ನು ಆ ವ್ಯಕ್ತಿ ಮರೆಯಬಾರದು ಎಂದು ಗುಡುಗಿದರು.
ಕುಮಾರಸ್ವಾಮಿ ಸಿಎಂ ಆಗಲು ನಾನು ಕಾರಣ ಇಲ್ಲ ಎಂದರೆ ಧರ್ಮಸ್ಥಳಕ್ಕೆ ಬಂದು ಆಣೆ-ಪ್ರಮಾಣ ಮಾಡಲಿ ಎಂದು ಸಚಿವ ಚಲುವರಾಯಸ್ವಾಮಿ ಸವಾಲು ಹಾಕಿದ್ದ ವಿಚಾರಕ್ಕೆ ಮಂಡ್ಯದಲ್ಲಿ ಮಾತನಾಡಿದ ಅವರು, ನಾನು ಸಿಎಂ ಆಗುವಾಗ ಚಲುವರಾಯಸ್ವಾಮಿ ನೋಡಿಕೊಂಡು ಎಂಎಲ್ಎಗಳು ಬಂದ್ರಾ? ಅಥವಾ ನನ್ನ ನೋಡಿಕೊಂಡು ಬಂದ್ರಾ? ಅನ್ನೋದಕ್ಕೆ ಧರ್ಮಸ್ಥಳದಲ್ಲಿ ಆಣೆ-ಪ್ರಮಾಣ ಮಾಡಲು ಸಿದ್ಧ ಎಂದು ತಿರುಗೇಟು ನೀಡಿದರು.
ನಾನು ಆಣೆ ಮಾಡಲು ತಯಾರಿದ್ದೇನೆ. ನಾನು ಸಿಎಂ ಆಗುವಾಗ ಚಲುವರಾಯಸ್ವಾಮಿ ನೋಡಿ ಎಂಎಲ್ಎಗಳು ಬಂದ್ರಾ ಏನು ಅಂತ. ಇದು ಸುಳ್ಳು ಚಲುವರಾಯಸ್ವಾಮಿಯನ್ನು ಮಂತ್ರಿ ಮಾಡಲು ಶ್ರಮ ಹಾಕಿದ್ದೇನೆ ಎಂದು ತಿಳಿಸಿದ್ದಾರೆ.
ಚಲುವರಾಯಸ್ವಾಮಿ ಮಂತ್ರಿ ಮಾಡಲು 50 ಜನ ಶಾಸಕರನ್ನು ಸೇರಿಸಿದ್ದೆ. ನಾನು ಪಟ್ಟಿರುವ ಶ್ರಮವನ್ನು ಚಲುವರಾಯಸ್ವಾಮಿ ಮರೆಯಬಾರದು ಎಂದು ಕೇಂದ್ರ ಸಚಿವರು ಹೇಳಿದ್ದಾರೆ.
ಮಂಡ್ಯದಲ್ಲಿ ಕೇಳಿದ್ರೆ ಚಲುವರಾಯಸ್ವಾಮಿ ಚಟಗಳ ಬಗ್ಗೆ ಹೇಳುತ್ತಾರೆ. ಚಲುವರಾಯಸ್ವಾಮಿ ಎಷ್ಟು ಮನೆ ಹಾಳು ಮಾಡಿದ್ದಾರೆ ಎಂದು ಎಲ್ಲರಿಗೂ ಗೊತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.