ಕ್ಷೇತ್ರದ ಅಭಿವೃದ್ಧಿಗೆ ಓಡಾಡುತ್ತಿದ್ದೇನೆ ಸಭೆಗೂ ಹೋಗಲ್ಲ, ಸಂಘಟನೆಗೂ ಬರಲ್ಲ: ಜಿಟಿಡಿ ಸ್ಪಷ್ಟನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜೆಡಿಎಸ್​ ರಾಜ್ಯಾಧ್ಯಕ್ಷರ ಆಯ್ಕೆಗೆ ನಾಳೆ ಸಭೆ ಕರೆದಿರುವ ವಿಚಾರವಾಗಿ ಪಕ್ಷದ ಶಾಸಕ ಜಿಟಿ ದೇವೇಗೌಡ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದು, ನಾಳೆಯ ಸಭೆಯಲ್ಲಿ ನಾನು ಭಾಗಿಯಾಗಲ್ಲ ಎಂದಿದ್ದಾರೆ.

ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗೆ ಓಡಾಡುತ್ತಿದ್ದೇನೆ. ಹೀಗಾಗಿ ಪಕ್ಷದ ಸಂಘಟನೆ ಹಾಗೂ ಸಭೆಗೆ ಹಾಜರಾಗಲು ಆಗುತ್ತಿಲ್ಲ. ಇದನ್ನು ಹೊರತುಪಡಿಸಿದರೆ ನನಗೆ ಯಾವುದೇ ಬೇಸರ ಕೂಡ ಇಲ್ಲ ಎಂದು ಹೇಳಿದ್ದಾರೆ.

ನನಗೆ ಮನೆಯ ಜವಾಬ್ದಾರಿ ಸ್ವಲ್ಪ ಜಾಸ್ತಿಯಾಗಿದೆ. ಮತ್ತೆ ಕ್ಷೇತ್ರ ನೀವೇ ನೋಡಿದ್ದೀರಿ, 900 ಬಡಾವಣೆಗಳು ಹಸ್ತಾಂತರ ಮಾಡಿದ್ದಾರೆ. ಸುಮಾರು 10 ವರ್ಷ 15 ವರ್ಷದಿಂದ ಮುಡಾನೂ ಅಭಿವೃದ್ಧಿ ಮಾಡಿಲ್ಲ. ನಗರಪಾಲಿಕೆಯೂ ಅಭಿವೃದ್ಧಿಯಾಗಬೇಕಿದೆ ಎಂದು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!