ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಚಿವ ಅಶ್ವತ್ಥ್ ನಾರಾಯಣ್ ಮಂಡ್ಯದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಟಿಪ್ಪುವಿನಂತೆ ಸಿದ್ದರಾಮಯ್ಯರನ್ನೂ ಹೊಡೆದು ಹಾಕಬೇಕು ಎನ್ನುವ ಹೇಳಿಕೆ ನೀಡಿದ್ದು, ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿತ್ತು.
ಪರ-ವಿರೋಧ ಚರ್ಚೆ ನಂತರ ಇದೀಗ ಸಚಿವ ಅಶ್ವತ್ಥ್ ನಾರಾಯಣ್ ಅವರು ಮಾತನಾಡಿದ್ದು, ನನಗೆ ಸಿದ್ದರಾಮಯ್ಯ ಮೇಲೆ ವೈಯಕ್ತಿಕ ದ್ವೇಷ ಇಲ್ಲ, ನನ್ನ ಹೇಳಿಕೆಗಳನ್ನು ತಿರುಗಿಸಿ ಹೇಳೋದು ಸಿದ್ದರಾಮಯ್ಯಗೆ ಒಂದು ನಿಮಿಷದ ಕೆಲಸ. ಆದರೂ ನನ್ನ ಮಾತುಗಳಿಂದ ಮನಸ್ಸಿಗೆ ನೋವಾಗಿದ್ರೆ ವಿಷಾದಿಸುತ್ತೇನೆ ಎಂದಿದ್ದಾರೆ.
ಎಲ್ಲ ಮಾತುಗಳು ರಾಜಕೀಯವಾಗಿ ಹಾಗೂ ಸೈದ್ಧಾಂತಿಕವಾಗಿ ಹೇಳಿದ್ದೇ ಹೊರತು ವೈಯಕ್ತಿಕವಾಗಿ ಅಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.