ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪುತ್ರ, ಶಾಸಕ ಯತೀಂದ್ರ ಯಾವ ಕ್ಷೇತ್ರದಿಂದ ಸ್ಪರ್ಧಿಸ್ತಾರೆ ಅನ್ನೋ ಪ್ರಶ್ನೆಗೆ ಉತ್ತರ ಸಿಕ್ಕಿದ್ದು, ಇದೀಗ ವರುಣಾದಲ್ಲೇ ಸ್ಪರ್ಧಿಸ್ತೀನಿ ಎಂದು ಯತೀಂದ್ರ ಘೋಷಿಸಿದ್ದಾರೆ.
ತಂದೆ ಸಿದ್ದರಾಮಯ್ಯನವರು ಕೋಲಾರದಿಂದ ಸ್ಪರ್ಧಿಸುತ್ತಾರೆ, ನಾನು ವರುಣಾದಿಂದ ಸ್ಪರ್ಧಿಸುತ್ತೇನೆ ಎಂದು ಯತೀಂದ್ರ ಹೇಳಿದ್ದಾರೆ. ವರುಣಾ ಕಾಂಗ್ರೆಸ್ ಭದ್ರಕೋಟೆ, ಇಲ್ಲಿ ಕಾಲದಿಂದಲೂ ಕಾಂಗ್ರೆಸ್ ಗೆಲುವು ಸಾಧಿಸಿದೆ ಎಂದು ಹೇಳಿದ್ದಾರೆ.