ನಾನು ರಾಜಕೀಯಕ್ಕೆ ಬಂದಿರುವುದು ‘ರಾಜಕೀಯ’ ಮಾಡುವುದಕ್ಕೆ ಅಲ್ಲ: ಡಾ.ಮಂಜುನಾಥ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಡಾ. ಸಿ.ಎನ್​ ಮಂಜುನಾಥ್ ಅವರಿಗೆ ಲೋಕಸಭೆ ಚುನಾವಣೆಯ ಟಿಕೆಟ್ ಘೋಷಿಸಿದ ಹಿನ್ನೆಲೆಯಲ್ಲಿ ಇಂದು ದೆಹಲಿಗೆ ತೆರಳಿ ಅಮಿತ್ ಶಾ ಅವರನ್ನು ಭೇಟಿಯಾಗಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿರುವ ಅವರು ನಾನು ರಾಜಕೀಯ ಮಾಡಲು ರಾಜಕೀಯಕ್ಕೆ ಬಂದಿಲ್ಲ, ಇದೊಂದು ಸೌಹಾರ್ದಯುತ ಭೇಟಿ. ನಾನು ಈ ಹಿಂದೆ ಅಮಿತ್ ಶಾ ಅವರನ್ನು ಭೇಟಿ ಮಾಡಿಲ್ಲ, ಲೋಕಸಭೆ ಚುನಾವಣೆಗೆ ಸಹಕಾರ ನೀಡುವಂತೆ ಕೇಳಲು ಬಂದಿದ್ದೆ ಎಂದು ತಿಳಿಸಿದ್ದಾರೆ.

ಸೋಮವಾರ (ಮಾರ್ಚ್ 18) ಬೆಂಗಳೂರಿನಲ್ಲಿ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾಗಲಿದ್ದೇನೆ. ವೈಯಕ್ತಿಕವಾಗಿ ಯಾರನ್ನು ಟೀಕಿಸಲ್ಲ ಇದೊಂದು ಧರ್ಮಯುದ್ಧ ಇದ್ದಂತೆ ಜಿಡಿಎಸ್ ಬಿಜೆಪಿ ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡುತ್ತಾರೆ. ಹೋದಲ್ಲೆಲ್ಲಾ ಸಕಾರಾತ್ಮಕ ಪ್ರತಿಕ್ರಿಯೆ ಸಿಗುತ್ತದೆ ಎಂದು ಮಂಜುನಾಥ್ ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!