ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾಷೆಗೆ ಸಂಬಂಧಿಸಿದ ಎಲ್ಲ ತಗಾದೆಗಳನ್ನು ನಮ್ಮ ಸರ್ಕಾರ ಕಿತ್ತುಹಾಕಿದೆ, ಭಾಷೆಯ ಹೆಸರಲ್ಲಿ ರಾಜಕೀಯದ ಬೇಳೆ ಬೇಯಿಸಿಕೊಳ್ಳುವುದನ್ನು ನಾನು ಖಂಡಿಸುತ್ತೇನೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.
ತಾನು ಪ್ರತಿನಿಧಿಸುವ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಬಹಳಷ್ಟು ಜನ ಮರಾಠಿ ಭಾಷಿಕರಿದ್ದಾರೆ, ಅವರೆಲ್ಲ ನನಗೆ ವೋಟು ನೀಡಿ ಗೆಲ್ಲಿಸಿದ್ದಾರೆ, ಅವರೆಲ್ಲ ಕನ್ನಡ ಮತ್ತು ಕನ್ನಡಿಗರ ವಿರೋಧಿಗಳು ಅಂತ ಹೇಳೋಕೆ ಆಗಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ.