ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಿಜಾಬ್ ಧರಿಸದಿದ್ದರೆ ಅತ್ಯಾಚಾರಗಳು ಹೆಚ್ಚಾಗುತ್ತವೆ ಎಂಬ ಜಮೀರ್ ಅಹ್ಮದ್ ಖಾನ್ ಹೇಳಿಕೆಯನ್ನು ದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಖಂಡಿಸಿದ್ದು, ನಾನು ಅವರ ಮಾತನ್ನು ಒಪ್ಪುವುದಿಲ್ಲ. ಆ ಮಾತನ್ನು ಹಿಂಪಡೆಯಲು ಹೇಳುತ್ತೇನೆ. ಅವರು ಕ್ಷಮೆ ಕೇಳಬೇಕು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವಿಚಾರದ ಬಗ್ಗೆ ಯಾರು ಮಾತನಾಡಬಾರದು ಎಂದು ಹೇಳಿದ್ದೆ. ಆದರೂ ಕೆಲವರು ಮಾತನಾಡುತ್ತಿದ್ದಾರೆ. ಹಾಗಾಗಿ ವಿವರಣೆ ಕೇಳುತ್ತೇನೆ ಎಂದು ಡಿ ಕೆ ಶಿವಕುಮಾರ್ ಹೇಳಿದರು.