ಚುನಾವಣೆಗೆ ಸ್ಪರ್ಧಿಸಲು ನನ್ನ ಬಳಿ ಹಣವಿಲ್ಲ, ಹೀಗಾಗಿ ಸ್ಪರ್ಧೆ ಮಾಡಲ್ಲ: ನಿರ್ಮಲಾ ಸೀತಾರಾಮನ್‌

ಹೊಸದಿಗಂತ ಡಿಜಿಟಲ್ ಡೆಸ್ಕ್:

ಲೋಕಸಭೆ ಚುನಾವಣೆಗೆ ಸ್ಪರ್ಧಿಸುವಷ್ಟು ಹಣ ನನ್ನ ಬಳಿ ಇಲ್ಲ. ನಾನು ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಹೈಕಮಾಂಡ್‌ಗೆ ತಿಳಿಸಿದ್ದೇನೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಆಂಧ್ರಪ್ರದೇಶ ಅಥವಾ ತಮಿಳುನಾಡಿನಿಂದ ಚುನಾವಣೆಗೆ ಸ್ಪರ್ಧಿಸಲು ಅವಕಾಶ ನೀಡಿದ್ದಾರೆ. ಚುನಾವಣೆಯಲ್ಲಿ ಭಾಗವಹಿಸಲು ನನ್ನ ಬಳಿ ಹಣವಿಲ್ಲ. ಹಾಗಾಗಿ ಚುನಾವಣೆಗೆ ಸ್ಪರ್ಧಿಸುವ ಬಿಜೆಪಿ ಪ್ರಸ್ತಾಪವನ್ನು ತಿರಸ್ಕರಿಸಿದ್ದೇನೆ ಎಂದು ಹೇಳಿದರು.

ಒಂದು ವಾರ ಅಥವಾ ಹತ್ತು ದಿನ ಯೋಚಿಸಿ ಈ ನಿರ್ಧಾರ ತೆಗೆದುಕೊಂಡೆ. ನನ್ನ ಬಳಿ ಸಾಕಷ್ಟು ಹಣವಿಲ್ಲ. ಅವರು ನನ್ನ ನಿಲುವನ್ನು ಒಪ್ಪಿಕೊಂಡಿದ್ದಕ್ಕಾಗಿ ನಾನು ತುಂಬಾ ಕೃತಜ್ಞಳಾಗಿದ್ದೇನೆ. ಹಾಗಾಗಿ ಇದನ್ನು ನಾನು ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!